ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಾಜಿ ಯೋಧರಾದ ಮೋಹನ್ ಜಿ.ಮೂಲ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶಾಲಾ ಪರಿಸರದ ಬಗ್ಗೆ ಖುಷಿ ವ್ಯಕ್ತಪಡಿಸಿದರು. 90ರ ದಶಕದಲ್ಲಿ ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿ ಅವರ ಅಂಗರಕ್ಷಕರಾಗಿದ್ದ ಬಗ್ಗೆ ತನ್ನ ಅನುಭವಗಳನ್ನು ತೆರೆದಿಟ್ಟರು. ಮಕ್ಕಳು ದೇಶ ಸೇವೆಯ ಕಾಯಕದಲ್ಲಿ ತೊಡಗಲು ಪ್ರೇರೇಪಿಸಿದರು. ಮಕ್ಕಳೊಂದಿಗೆ ತನ್ನ ವೃತ್ತಿ ಜೀವನದ ಬಗ್ಗೆ ಅನುಭವಗಳನ್ನು ಹಂಚಿಕೊಂಡರು.

ಸಂವಿಧಾನದ ಪೀಠಿಕೆಯನ್ನು ತುಳು ಭಾಷೆಯಲ್ಲಿ ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು


ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿದರು. ಶಾಲಾ ಅತಿಥಿ ಶಿಕ್ಷಕಿ ಭವ್ಯ ಧನ್ಯವಾದವನ್ನು ಸಲ್ಲಿಸಿದರು. ಬಂಟ್ವಾಳ ತಾಲೂಕಿನ ನಯನಾಡು ಎಂಬಲ್ಲಿ ನಯನ್ ಬೇಕರಿ ಮಾಲಕರಾದ ಮೆಲ್ವಿಸ್ಟರ್ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸಂವಿಧಾನ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya
error: Content is protected !!