March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಓಡಿಲ್ನಾಳ : ಸ ಉ ಪ್ರಾ ಶಾಲೆ ಓಡಿಲ್ನಾಳ 77ನೇ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮದ್ದಡ್ಕ ಧ್ವಜಾರೋಹಣಗೈದರು. ಮುಖ್ಯ ಶಿಕ್ಷಕಿ ಉಷಾ. ಪಿ. ಶಾಲಾ ನಾಯಕ ನಂದನ್ ಕೆ ಶರ್ಮಾ ಹಾಗೂ ದೈಹಿಕ ಶಿಕ್ಷಕರಾದ ಜಯರಾಜ ಜೈನ್ ಇವರ ಮುಂದಾಳತ್ವದಲ್ಲಿ ಪಥ ಸಂಚಲನ ನಡೆಯಿತು. ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ನಸೀಮ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ಸತೀಶ್ ದೇವಾಡಿಗ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಮ್ಮನ್ವಿಎಸ್ ಶೆಟ್ಟಿ, ಸುಜಯ, ಫಿದಾ ಫಾತಿಮಾ ಹಾಗೂ ನಿವೇದಿತಾ ಗೌಡ ಇವರು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ದಿನದ ಮಹತ್ವದ ಕುರಿತಂತೆ ಶಿಕ್ಷಕಿ ನಯನ.ಟಿ ಇವರು ಮಾತನಾಡಿದರು. ಶಾರದಾಮಣಿ. ಬಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!