March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

ಕೊಕ್ಕಡ: ಹಿಂದೂ ಸಂಗಮ ಆಯೋಜನಾ ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ ಜ.25 ರಂದು ಕೊಕ್ಕಡದ ಸಂಕ್ರಾಂತಿ ಮೈದಾನದಲ್ಲಿ ನಡೆಯಿತು.

ಕೊಕ್ಕಡ ಮತ್ತು ಪಟ್ರಮೆ ಮಂಡಲ ವತಿಯಿಂದ ನಡೆದ ಹಿಂದೂ ಸಂಗಮ ಕಾರ್ಯಕ್ರಮವು ಕೊಕ್ಕಡದ ಜಂಕ್ಷನ್ ನಿಂದ ಪುಟಾಣಿ ಮಕ್ಕಳ ವಿವಿಧ ವೇಷ ಗಳೊಂದಿಗೆ ಸ್ಥಳೀಯ ಭಜನಾ ತಂಡದಿಂದ ಕುಣಿತಾ ಭಜನೆ ಹಾಗೂ ಮಹಿಳೆಯರಿಂದ ಪೂರ್ಣ ಕುಂಭದೊಂದಿಗೆ ಭವ್ಯ ಶೋಭಾ ಯಾತ್ರೆಯು ನಡೆಯಿತು.

ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ರವರು ಗೋ ಪೂಜೆ ನೆರವೇರಿಸಿ ದೀಪಪ್ರಜ್ವಲಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಹಿಂದೂ ಸಮಾಜವನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ವಕ್ತಾರರಾದ ಅಚ್ಚುತ ನಾಯಕ್ ಪುತ್ತೂರು ಮಾತನಾಡಿ ಹಿಂದುತ್ವ ಎಂದರೇನು? ಹಿಂದೂ ಹೇಗಿರಬೇಕು , ಜಾತಿ ಬೇಧ ಮರೆತು ಒಂದಾದಲ್ಲಿ ಮಾತ್ರ ಹಿಂದುತ್ವ ಉಳಿಯಲು ಸಾಧ್ಯ ಎಂದರು. ಸಭಾ ಅಧ್ಯಕ್ಷತೆಯನ್ನು ವಹಿಸಿದ ಡಾ. ತಾರಾಗಣೇಶ್ ಮಾತನಾಡಿದರು.

ವೇದಿಕೆಯಲ್ಲಿ ಉದ್ಯಮಿ ಬಾಲಕೃಷ್ಣ ನೈಮಿಷ ಕೊಕ್ಕಡ , ರುಕ್ಮಯ ಮಡಿವಾಳ ಕೊಕ್ಕಡ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಲವು ಗಣ್ಯರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,

ರುಕ್ಮಯ ಮಡಿವಾಳ ಸ್ವಾಗತಿಸಿ, ಅಶ್ವಿನಿ ಓಣಿತಾರು ಧನ್ಯವಾದವಿತ್ತರು.

Related posts

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!