July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

ಕೊಕ್ಕಡ: ಹಿಂದೂ ಸಂಗಮ ಆಯೋಜನಾ ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ ಜ.25 ರಂದು ಕೊಕ್ಕಡದ ಸಂಕ್ರಾಂತಿ ಮೈದಾನದಲ್ಲಿ ನಡೆಯಿತು.

ಕೊಕ್ಕಡ ಮತ್ತು ಪಟ್ರಮೆ ಮಂಡಲ ವತಿಯಿಂದ ನಡೆದ ಹಿಂದೂ ಸಂಗಮ ಕಾರ್ಯಕ್ರಮವು ಕೊಕ್ಕಡದ ಜಂಕ್ಷನ್ ನಿಂದ ಪುಟಾಣಿ ಮಕ್ಕಳ ವಿವಿಧ ವೇಷ ಗಳೊಂದಿಗೆ ಸ್ಥಳೀಯ ಭಜನಾ ತಂಡದಿಂದ ಕುಣಿತಾ ಭಜನೆ ಹಾಗೂ ಮಹಿಳೆಯರಿಂದ ಪೂರ್ಣ ಕುಂಭದೊಂದಿಗೆ ಭವ್ಯ ಶೋಭಾ ಯಾತ್ರೆಯು ನಡೆಯಿತು.

ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ರವರು ಗೋ ಪೂಜೆ ನೆರವೇರಿಸಿ ದೀಪಪ್ರಜ್ವಲಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಹಿಂದೂ ಸಮಾಜವನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ವಕ್ತಾರರಾದ ಅಚ್ಚುತ ನಾಯಕ್ ಪುತ್ತೂರು ಮಾತನಾಡಿ ಹಿಂದುತ್ವ ಎಂದರೇನು? ಹಿಂದೂ ಹೇಗಿರಬೇಕು , ಜಾತಿ ಬೇಧ ಮರೆತು ಒಂದಾದಲ್ಲಿ ಮಾತ್ರ ಹಿಂದುತ್ವ ಉಳಿಯಲು ಸಾಧ್ಯ ಎಂದರು. ಸಭಾ ಅಧ್ಯಕ್ಷತೆಯನ್ನು ವಹಿಸಿದ ಡಾ. ತಾರಾಗಣೇಶ್ ಮಾತನಾಡಿದರು.

ವೇದಿಕೆಯಲ್ಲಿ ಉದ್ಯಮಿ ಬಾಲಕೃಷ್ಣ ನೈಮಿಷ ಕೊಕ್ಕಡ , ರುಕ್ಮಯ ಮಡಿವಾಳ ಕೊಕ್ಕಡ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಲವು ಗಣ್ಯರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,

ರುಕ್ಮಯ ಮಡಿವಾಳ ಸ್ವಾಗತಿಸಿ, ಅಶ್ವಿನಿ ಓಣಿತಾರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!