July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya
error: Content is protected !!