25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya
error: Content is protected !!