25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

ನಡ: ಇಲ್ಲಿಯ ನಡ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ಹಂದಿ ಸಾಕುವ ಶೆಡ್‌ನಿಂದ ಹಂದಿಯೊಂದನ್ನು ಚಿರತೆ ಎಳೆದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಸ್ಥಳೀಯರಾದ ಶ್ಯಾಮಸುಂದರ್ ನಡ ಮಾಹಿತಿ ನೀಡಿದ್ದಾರೆ.

ನಡ ಗ್ರಾಮದ ಮೂಡಾಯಿಬೆಟ್ಟು ನಿವಾಸಿ ವಿನ್ಸೆಂಟ್ ಎಂಬವರು ಹಂದಿ ಸಾಕಾಣೆ ಮಾಡುತ್ತಿದ್ದು, ಇಂದು ಬೆಳಿಗ್ಗೆ ಹಂದಿ ಸಾಕಾಣೆ ಮಾಡುವ ಶೆಡ್‌ನ ಬಳಿ ರಕ್ತದ ಕಲೆಗಳು ಕಂಡು ಬಂದಿದ್ದು, ಇವರ ಸಾಕುತ್ತಿದ್ದ ಹಂದಿಗಳಲ್ಲಿ ಒಂದು ಹಂದಿ ನಾಪತ್ತೆಯಾಗಿರುವುದು ಕಂಡು ಬಂದಿದೆ. ಶೆಡ್‌ಗೆ ನುಗ್ಗಿದ ಚಿರತೆ ಹಂದಿಯನ್ನು ಕಾಡಿಗೆ ಎಳೆದೊಯ್ದಿರಬಹುದೆಂದು ಸಂಶಯಿಸಲಾಗಿದೆ. ಮೂಡಾಯಿಬೆಟ್ಟು ಪರಿಸರದ ಕಾಡಿನಲ್ಲಿ ಚಿರತೆ ಓಡಾಟವಿದೆ ಎಂದು ಸ್ಥಳೀಯರಾದ ಶ್ಯಾಮ್‌ಸುಂದರ್ ನಡ ತಿಳಿಸಿದ್ದಾರೆ. ಸಮೀಪದಲ್ಲೆ ಸರಕಾರಿ ಶಾಲೆಯೊಂದಿದ್ದು, ಸ್ಥಳೀಯರಲ್ಲಿ ಆಂತಕ ಎದುರಾಗಿದೆ.

Related posts

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya
error: Content is protected !!