ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ ತಾಲೂಕು ಆಡಳಿತ ಸೌಧ ಆವರಣದಲ್ಲಿ ಜ.26 ರಂದು ನಡೆಯಿತು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ ಧಜ್ವಾರೋಹಣ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಧಾನ ಭಾಷಣ ಮಾಡಿದರು. ಪಿಡಬ್ಲ್ಯೂಡಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಸ್ವಾಗತಿಸಿದರು.
ಪೋಲಿಸರು, ಗೃಹ ರಕ್ಷಕ ದಳದ ಸಿಬ್ಬಂದಿಗಳು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.











