July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಜ.26ರಂದು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾ ಟಿ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಮಹತ್ವ, ವಿಶೇಷತೆಯ ಬಗ್ಗೆ ತಿಳಿಸಿದರು. ಎನ್.ಸಿ.ಸಿ ಅಧಿಕಾರಿಗಳಾದ ಸದಾನಂದ ಮತ್ತು ವಿವೇಕ್ ಜೈನ್ , ಎನ್.ಸಿ.ಸಿ ಆರ್ಮಿ ಮತ್ತು ನೇವಲ್ ಕೆಡೆಟ್ ಗಳು ಹಾಜರಿದ್ದು ರತ್ನವರ್ಮ ಕ್ರೀಡಾಂಗಣದಲ್ಲಿ ಜರಗಿದ ಪಥಸಂಚಲನದಲ್ಲಿ ಭಾಗವಹಿಸಿದರು.

ಶಿಕ್ಷಕ ಚಂದ್ರಶೇಖರ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಧನ್ಯವಾದ ನೀಡಿದರು. ವಿದ್ಯಾರ್ಥಿಗಳು ಶಿಕ್ಷಕವೃಂದ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು

Related posts

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya
error: Content is protected !!