25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

ಕಾಪಿನಡ್ಕ: ಹಿಂದೂ ಸಂಗಮ ಆಯೋಜನಾ ಸಮಿತಿ ವೇಣೂರು ತಾಲೂಕು ಬಳಂಜ ಮಂಡಲದಿಂದ ಹಿಂದೂ ಸಂಗಮ ಕಾರ್ಯಕ್ರಮವು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜ 25ರಂದು ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಪ್ರಚಾರಕ ಸುಧೀಶ್ ದಿಕ್ಸೂಚಿ ಭಾಷಣ ಮಾಡಿದರು.

ಹಿಂದೂ ಸಂಗಮದ ಅಧ್ಯಕ್ಷತೆಯನ್ನು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ ವಹಿಸಿದ್ದರು.

ವೇದಿಕೆಯಲ್ಲಿ ಹಿಂದೂ ಸಂಗಮ ಸಮಿತಿ ಉಪಾಧ್ಯಕ್ಷರಾದ ಪಿ.ಎನ್ ಪುರುಷೋತ್ತಮ, ಹಿಂದೂ ಸಂಗಮ ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯ ಗೌಡ,ಹಿಂದೂ ಸಂಗಮ ಆಯೋಜನ ಸಮಿತಿ ಬಳಂಜ ಮಂಡಲದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಉಪಸ್ಥಿತರಿದ್ದರು.

ಗುಂಡೇರಿಯಿಂದ ಸಾವಿರಾರು ಹಿಂದೂ ಬಂಧುಗಳು ಬ್ರಹತ್ ಮೆರವಣಿಗೆಯ ಮೂಲಕ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಾಗಿ ಬಂದು ದೇವರಿಗೆ ಪೂಜೆ ಸಲ್ಲಿಸಿದರು. ಶೋಭಾಯಾತ್ರೆಯಲ್ಲಿ ಕುಣಿತಾ ಭಜನೆ, ರಾಮ- ಸೀತೆ, ಭಾರತ ಮಾತೆ ಚಿತ್ರಗಳು ಎಲ್ಲರ ಗಮನ ಸೆಳೆಯಿತು. ಯುವಕರು,ಮಹಿಳೆಯರು,ಮಕ್ಕಳು ಅತ್ಯಂತ ಖುಷಿಯಿಂದ ಪಾಲ್ಗೊಂಡರು. ಬಳಿಕ ಗೋ ಪೂಜೆ ನೇರವೇರಿಸಲಾಯಿತು. ಸಣ್ಣ ಸಣ್ಣ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ,ಸದಾನಂದ ಪೂಜಾರಿ ಉಂಗಿಲಬೈಲು, ಸಂತೋಷ್ ಹೆಗ್ಡೆ, ಅನಿಲ್ ಕುಮಾರ್ ಮಾಳಿಗೆ ಮನೆ,ಪ್ರಕಾಶ್ ಪುರೂಹಿತ್, ಪ್ರತೀಶ್ ಪೆರಿಂಜೆ, ಸುಧೀರ್ ಆರ್ ಸುವರ್ಣ, ಶ್ರೀನಿವಾಸ್ ರೈ ಕಾರಂದೂರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗಿಯಾಗಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿ ಬಳಂಜ ಮಂಡಲದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಸ್ವಾಗತಿಸಿದರು. ಆರ್ಯನ್ ಇವರಿಂದ ಅಮೃತ ವಚನ, ನಾರಾಯಣ್ ಕಲಿಕ ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಕಲಿಕ ವೈಯಕ್ತಿಕ ಗೀತೆ ಹಾಡಿದರು. ಎಂ.ಪಿ ಶೇಖರ್ ವಂದಿಸಿದರು.

Related posts

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!