ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

ಕಾಪಿನಡ್ಕ: ಹಿಂದೂ ಸಂಗಮ ಆಯೋಜನಾ ಸಮಿತಿ ವೇಣೂರು ತಾಲೂಕು ಬಳಂಜ ಮಂಡಲದಿಂದ ಹಿಂದೂ ಸಂಗಮ ಕಾರ್ಯಕ್ರಮವು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜ 25ರಂದು ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಪ್ರಚಾರಕ ಸುಧೀಶ್ ದಿಕ್ಸೂಚಿ ಭಾಷಣ ಮಾಡಿದರು.

ಹಿಂದೂ ಸಂಗಮದ ಅಧ್ಯಕ್ಷತೆಯನ್ನು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ ವಹಿಸಿದ್ದರು.

ವೇದಿಕೆಯಲ್ಲಿ ಹಿಂದೂ ಸಂಗಮ ಸಮಿತಿ ಉಪಾಧ್ಯಕ್ಷರಾದ ಪಿ.ಎನ್ ಪುರುಷೋತ್ತಮ, ಹಿಂದೂ ಸಂಗಮ ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯ ಗೌಡ,ಹಿಂದೂ ಸಂಗಮ ಆಯೋಜನ ಸಮಿತಿ ಬಳಂಜ ಮಂಡಲದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಉಪಸ್ಥಿತರಿದ್ದರು.

ಗುಂಡೇರಿಯಿಂದ ಸಾವಿರಾರು ಹಿಂದೂ ಬಂಧುಗಳು ಬ್ರಹತ್ ಮೆರವಣಿಗೆಯ ಮೂಲಕ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಾಗಿ ಬಂದು ದೇವರಿಗೆ ಪೂಜೆ ಸಲ್ಲಿಸಿದರು. ಶೋಭಾಯಾತ್ರೆಯಲ್ಲಿ ಕುಣಿತಾ ಭಜನೆ, ರಾಮ- ಸೀತೆ, ಭಾರತ ಮಾತೆ ಚಿತ್ರಗಳು ಎಲ್ಲರ ಗಮನ ಸೆಳೆಯಿತು. ಯುವಕರು,ಮಹಿಳೆಯರು,ಮಕ್ಕಳು ಅತ್ಯಂತ ಖುಷಿಯಿಂದ ಪಾಲ್ಗೊಂಡರು. ಬಳಿಕ ಗೋ ಪೂಜೆ ನೇರವೇರಿಸಲಾಯಿತು. ಸಣ್ಣ ಸಣ್ಣ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ,ಸದಾನಂದ ಪೂಜಾರಿ ಉಂಗಿಲಬೈಲು, ಸಂತೋಷ್ ಹೆಗ್ಡೆ, ಅನಿಲ್ ಕುಮಾರ್ ಮಾಳಿಗೆ ಮನೆ,ಪ್ರಕಾಶ್ ಪುರೂಹಿತ್, ಪ್ರತೀಶ್ ಪೆರಿಂಜೆ, ಸುಧೀರ್ ಆರ್ ಸುವರ್ಣ, ಶ್ರೀನಿವಾಸ್ ರೈ ಕಾರಂದೂರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗಿಯಾಗಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿ ಬಳಂಜ ಮಂಡಲದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಸ್ವಾಗತಿಸಿದರು. ಆರ್ಯನ್ ಇವರಿಂದ ಅಮೃತ ವಚನ, ನಾರಾಯಣ್ ಕಲಿಕ ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಕಲಿಕ ವೈಯಕ್ತಿಕ ಗೀತೆ ಹಾಡಿದರು. ಎಂ.ಪಿ ಶೇಖರ್ ವಂದಿಸಿದರು.

Related posts

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya
error: Content is protected !!