ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಾಜಿ ಯೋಧರಾದ ಮೋಹನ್ ಜಿ.ಮೂಲ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶಾಲಾ ಪರಿಸರದ ಬಗ್ಗೆ ಖುಷಿ ವ್ಯಕ್ತಪಡಿಸಿದರು. 90ರ ದಶಕದಲ್ಲಿ ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿ ಅವರ ಅಂಗರಕ್ಷಕರಾಗಿದ್ದ ಬಗ್ಗೆ ತನ್ನ ಅನುಭವಗಳನ್ನು ತೆರೆದಿಟ್ಟರು. ಮಕ್ಕಳು ದೇಶ ಸೇವೆಯ ಕಾಯಕದಲ್ಲಿ ತೊಡಗಲು ಪ್ರೇರೇಪಿಸಿದರು. ಮಕ್ಕಳೊಂದಿಗೆ ತನ್ನ ವೃತ್ತಿ ಜೀವನದ ಬಗ್ಗೆ ಅನುಭವಗಳನ್ನು ಹಂಚಿಕೊಂಡರು.

ಸಂವಿಧಾನದ ಪೀಠಿಕೆಯನ್ನು ತುಳು ಭಾಷೆಯಲ್ಲಿ ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು


ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿದರು. ಶಾಲಾ ಅತಿಥಿ ಶಿಕ್ಷಕಿ ಭವ್ಯ ಧನ್ಯವಾದವನ್ನು ಸಲ್ಲಿಸಿದರು. ಬಂಟ್ವಾಳ ತಾಲೂಕಿನ ನಯನಾಡು ಎಂಬಲ್ಲಿ ನಯನ್ ಬೇಕರಿ ಮಾಲಕರಾದ ಮೆಲ್ವಿಸ್ಟರ್ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya
error: Content is protected !!