March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ವಲಯ ಘಟಕ ಅಶೋಕನಗರ ಧರ್ಮಸ್ಥಳದಲ್ಲಿ 77ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು. ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಇವರು ದೀಪ ಬೆಳಗಿಸಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭಹಾರೈಸಿದರು.

ಮಡಂತ್ಯಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ ಮಾತನಾಡಿ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದಾದ ಭ್ರಾತೃತ್ವ ಪದವನ್ನು ಸರಿಯಾಗಿ ಅರ್ಥೈಸಿಕೊಂಡು ಎಲ್ಲರೂ ಸಹೋದರತೆಯಿಂದ ಬದುಕಿದಲ್ಲಿ ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಸೃಷ್ಠಿಯಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ನಮಗೆ ಕೇವಲ ಹಕ್ಕುಗಳನ್ನು ಮಾತ್ರ ತಿಳಿಸಿಲ್ಲ ಜೊತೆಯಲ್ಲಿ ಕರ್ತವ್ಯಗಳನ್ನು ಕೂಡಾ ತಿಳಿಸಿದೆ. ಈ ಕರ್ತವ್ಯಗಳನ್ನು ತಿಳಿದುಕೊಂಡು ಸಂವಿಧಾನಬದ್ಧವಾಗಿ ಜೀವನ ನಡೆಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿ ಸಂವಿಧಾನದ ಮಹತ್ವವನ್ನು ವಿವರಿಸಿದರು. ವಲಯ ಘಟಕದ ಅಧ್ಯಕ್ಷ ಗಣೇಶ್ ಡಿ. ಅಧ್ಯಕ್ಷತೆ ವಹಿಸಿ ಗಣರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ಜೀವನದಲ್ಲಿ ಸಂವಿಧಾನದ ಮಹತ್ವವನ್ನು ಅನುಸರಿಸಬೇಕು ಎಂದು ತಿಳಿಸಿದರು.

೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಆದಿದ್ರಾವಿಡ ಸಮಾಜ ಸೇವಾ ಸಂಘದ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು. ಅಶೋಕನಗರದ ಕರಿಯ ಗುರಿಕಾರ ಹಾಗೂ ಸದಾಶಿವ ಗುರಿಕಾರ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂಗೀತ ಹಾಗೂ ಜ್ಯೋತಿ ಬುದ್ಧಗೀತೆ ಹಾಡಿದರು. ಶಶಿಕಲಾ ಸ್ವಾಗತಿಸಿ, ಅನಿತಾ ಧನ್ಯವಾದವಿತ್ತರು. ಸುನೀತಾ ಡಿ.ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!