25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.23ರಂದು ಪ್ರಾರಂಭಗೊಂಡು ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯು ಜ. 26ರಂದು ಜರುಗಿತು.

ಸಂಜೆ ಮೋಹನ ಬಂಗೇರ ರವರು ನೀಡಿದ ಸಲಹೆ ಸೂಚನೆಯ ನಂತರ ಮಕ್ಕಳು, ಪುರುಷರು ಮತ್ತು ಮಹಿಳೆಯರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣವು ನಡೆಯಿತು. ನಂತರ ನಿವೃತ್ತ ಪ್ರಾಚಾರ್ಯ ಗಣಪತಿ ಭಟ್ ಕುಳಮರ್ವ ಪ್ರಾಸ್ತಾವಿಕ ಮಾತನಾಡಿದರು.

ಗಣ್ಯರಿಂದ ದೀಪ ಪ್ರಜ್ವಲನೆಗೊಂಡ ಬಳಿಕ ಡಾ| ವೀಣಾ ಬನ್ನಂಜೆರವರು ತನ್ನ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯಲ್ಲಿ ತನ್ನ 11ನೇ ವಯಸ್ಸಿನಲ್ಲಿ ಅಪಾರ ಜನರ ಪ್ರೀತಿ ವಿಶ್ವಾಸ ಗಳಿಸಿದ್ದ ಶ್ರೀ ಕೃಷ್ಣನು ಎರಡು ತಿಂಗಳಲ್ಲಿ 64 ವಿದ್ಯೆಗಳನ್ನು ಕಲಿತಿದ್ದ. ಹಿಂದೆ ಗುರುಕುಲದಲ್ಲಿ 12 ವರ್ಷ ಕಾಲ ಬದುಕುವ ಶಿಕ್ಷಣ ಕಲಿಸಲಾಗುತ್ತಿತ್ತು. ಕೃಷ್ಣ ರಾಜಕಾರಣಿಯಲ್ಲ ಧರ್ಮಕಾರಣಿಯಾಗಿದ್ದ. ಕೃಷ್ಣ ಜ್ಞಾನಿಗಳಲ್ಲಿ ಮಹಾಜ್ಞಾನಿ ಆಗಿದ್ದ ಎಂದ ಅವರು ಕೃಷ್ಣನ ಬಗೆಗಿನ ಹಲವು ವಿಚಾರಗಳನ್ನು ಎರಡು ಗಂಟೆಗಳ ಕಾಲ ನಿರರ್ಗಳವಾಗಿ ತಿಳಿಯಪಡಿಸಿದರು.

ವಾರ್ಷಿಕ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಡಾ. ಪ್ರದೀಪ್ ಎ. ಧನ್ಯವಾದವಿತ್ತರು. ನಂತರ ಶ್ರೀ ದೇವರಿಗೆ ರಂಗ ಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನ ಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಪೂರಣ್ ವರ್ಮ, ಸೋನಿಯಾ ವರ್ಮ, ಶ್ರೀ ಗೋಪಾಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಟ್ರಸ್ಟ್ ಪ್ರದಾನ ಕಾರ್ಯದರ್ಶಿ ಲ| ಧರ್ಣಪ್ಪ ಮೂಲ್ಯ ಕಾಯರ್ದಡಿ, ಕಾರ್ಯದರ್ಶಿ ತಿಮ್ಮಪ್ಪ ಜಿ ಗೋಳ್ತಾರ, ಕೋಶಾಧಿಕಾರಿ ಬಿ ಉಮೇಶ್ ಪ್ರಭು ಹಡೀಲು, ಸದಸ್ಯರಾದ ಎ.ಬಿ ಉಮೇಶ್ ಅತ್ಯಡ್ಕ, ಹರೀಶ್ ಕೆ ಕಾರಿಂಜ, ತನಿಯಪ್ಪ ನಲ್ಕೆ ಕಿರ್ನಡ್ಕ, ಎನ್ ಗಣೇಶ್ ಗೌಡ ನೆಲ್ಲಿಪಲ್ಕೆ, ವಾರ್ಷಿಕ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ದಶಮಾನೋತ್ಸವ ಸಮಿತಿ ಪದಾಧಿಕಾರಿಗಳು, ಬೈಲುವಾರು ಸಮಿತಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸಮಿತಿಗಳು, ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
error: Content is protected !!