July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಇದರ ಸ್ಥಾಪಕಾಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ ಸದಾ ತನ್ನ ಸಮುದಾಯವನ್ನು ಸಂಘಟನೆಯ ಮೂಲಕ ಒಗ್ಗೂಡಿಸಲು ಮತ್ತು ಕುಲದೈವಗಳ ಮೂಲ ಕ್ಷೇತ್ರದ ಜೀರ್ಣೋದ್ದಾರಕ್ಕೆ ಹಾಗೂ ಸಮುದಾಯದ ಏಳಿಗೆಗೆ ಅವಿರತ ಶ್ರಮಿಸಿದ ಶಿವಾನಂದ ಬಳ್ಳಾಲ್‌ಬಾಗ್ ಜ. 9 ರಂದು ನಿಧನರಾಗಿದ್ದು, ತಾಲೂಕು ಘಟಕದ ವತಿಯಿಂದ ನುಡಿನಮನ ಕಾರ್ಯಕ್ರಮವು ಬೆಳ್ತಂಗಡಿಯ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜ.25 ರಂದು ನಡೆಸಲಾಯಿತು.

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಹಿರಿಯರು ಮತ್ತು ಮಾರ್ಗದರ್ಶಕರಾದ ರಘು ಧರ್ಮಸೇನಾ ಇವರು ದಿ| ಶಿವಾನಂದ ಬಳ್ಳಾಲ್‌ಬಾಗ್ ಇವರ ಬಾವಚಿತ್ರಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡಿ, ಸಂಘಟನೆಗೆ ಮತ್ತು ಸಮುದಾಯಕ್ಕೆ ಅವರು ನೀಡಿದ ಕೊಡುಗೆಗಳು ಅಪಾರ. ಅವರ ತತ್ವಾದರ್ಶಗಳನ್ನು ಪ್ರಸ್ತುತ ನಾವು ಅಳವಡಿಸಿಕೊಂಡು ಸಮುದಾಯ ಮತ್ತು ಸಂಘಟನೆಯನ್ನು ಯಾವ ರೀತಿ ಬಲಪಡಿಸಬೇಕು ಎಂದು ವಿವರಿಸುವುದರ ಮೂಲಕ ನುಡಿನಮನ ಸಲ್ಲಿಸಿದರು.

ತಾಲೂಕು ಘಟಕದ ಗೌರವ ಸಲಹೆಗಾರರಾದ ಗೋಪಾಲಕೃಷ್ಣ ಕುಕ್ಕಳ, ಅಧ್ಯಕ್ಷ ದಿನೇಶ್ ಕೆ, ಕೊಕ್ಕಡ, ಪ್ರಧಾನ ಕಾರ್ಯದರ್ಶಿಯಾದ ಶೇಖರ್ ವಿ. ಧರ್ಮಸ್ಥಳ, ಹಾಗೂ ಸಂಘಟನೆಯ ಪ್ರಮುಖರಾದ ಬಾಬು ಬೆಳಾಲು, ಶ್ರೀನಿವಾಸ್ ಪಿ.ಎಸ್. ಇವರುಗಳು ದಿ| ಶಿವಾನಂದ ಬಳ್ಳಾಲ್‌ಬಾಗ್ ರವರು ಸಾಮಾಜಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯಕ್ಕೆ ಓರ್ವ ವ್ಯಕಿಯಾಗಿ ಮತ್ತು ಶಕ್ತಿಯಾಗಿ ನೀಡಿದ ಕೊಡುಗೆಗಳನ್ನು ಮನನ ಮಾಡಿಕೊಳ್ಳುವುದರ ಮೂಲಕ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಮತ್ತು ಗ್ರಾಮ ಸಮಿತಿಯ ಪದಾಧಿಕಾರಿಗಳು, ಆದಿದ್ರಾವಿಡ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಶೇಖರ್ ವಿ. ಧರ್ಮಸ್ಥಳ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya
error: Content is protected !!