July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಶಾರದಾ ಮಂಟಪದಲ್ಲಿ ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ” ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಾಸುದೇವ ಆಚಾರ್ಯ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಪಾತ್ರವರ್ಗದಲ್ಲಿ ರಾಮನಾಗಿ ಪ್ರಶಾಂತ ಮುಂಡ್ಕೂರು, ಲಕ್ಷ್ಮಣನಾಗಿ ಆದರ್ಶ ಮೂಡಬಿದರೆ, ವಿಭೀಷಣನಾಗಿ ಪ್ರಶಾಂತ್ ಆಚಾರ್ಯ ಪುತ್ತೂರು, ಹನುಮಂತನಾಗಿ ಈಶ್ವರಪ್ರಸಾದ ನಿಡ್ಲೆ, ರಾವಣನಾಗಿ ಶೀಶ ಮಣಿಲ, ರಾವಣ ದೂತ, ಜಾಂಬವಂತ ಮತ್ತು ಶುಕ್ರಾಚಾರ್ಯನಾಗಿ ಪೆರ್ವೋಡಿ ಅಶೋಕ ಸುಬ್ರಹ್ಮಣ್ಯ ಭಟ್,ಇಂದ್ರಜಿತುವಾಗಿ ಗಣೇಶ ಶೆಟ್ಟಿ ಸಾಣೂರು, ಮಾಯಾ ಸೀತೆಯಾಗಿ ಸುಹಾನ್ ಜೆಪ್ಪಿನಮೊಗರು ಪಾತ್ರ ನಿರ್ವಹಿಸಿದರು. ದೇವಸ್ಥಾನದ ವತಿಯಿಂದ ಭರತ್ ಕುಮಾರ್ ಉಜಿರೆ ಯಕ್ಷಭಾರತಿ ಸಂಸ್ಥೆಯ ಸಂಚಾಲಕ ಮಹೇಶ ಕನ್ಯಾಡಿಯವರನ್ನು ಗೌರವಿಸಿದರು. ರವೀಂದ್ರ ಶೆಟ್ಟಿ ಬಳೆಂಜ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya
error: Content is protected !!