September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ್ ಭಟ್, ಪ್ರಶಾಂತ್ ಆಚಾರ್ಯ, ಸಮಿತಿಯ ಜಿಲ್ಲಾ ಚಿಂತನಾಕೂಟ ಪ್ರಮುಖರಾದ ಹರೀಶ್ ಅಂಚನ್, ಶಿಕ್ಷಕರಾದ ಸುಕೇಶ್ ಹಾಗೂ ಸುಧಾಕರ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂಜಾನೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ 3 ಹಂತಗಳಲ್ಲಿ 9 ಬಾರಿ 108 ಸೂರ್ಯ ನಮಸ್ಕಾರ ಸಮಾಪನಗೊಂಡಿತು.
ರಥಸಪ್ತಮಿಯಂದು ಸೂರ್ಯನಮಸ್ಕಾರ ಮಾಡುವ ಮಹತ್ವವನ್ನು ಯೋಗಪಟು ರೂಪಾ ನವೀನ್ ತಿಳಿಸಿದರು. ಸೂರ್ಯನಮಸ್ಕಾರವನ್ನು 3 ಹಂತಗಳಲ್ಲಿ ಕ್ರಮವಾಗಿ ಯೋಗಪಟುಗಳಾದ ಸಿ.ಹೆಚ್. ಶಿವಶಂಕರ ಛತ್ರ,ಕುಮಾರಿ ಕೀರ್ತಿ, ನವೀನ್ ಕುಮಾರ್ ನಡೆಸಿಕೊಟ್ಟರು.

ಆರಂಭಿಕ ಸಿದ್ದತೆಯನ್ನು ಭಾರತಿ ಸುರೇಶ್ ನೆರವೇರಿಸಿದರು. ಪ್ರಾತ್ಯಕ್ಷಿತೆಯಲ್ಲಿ ಯೋಗ ಪಟುಗಳಾದ ಸರಿತಾ, ಭವಾನಿ, ಕೇಶವ, ದೀಕ್ಷಿತ್, ವಿದ್ಯಾ, ವಿಜಯ, ರಮ್ಯಾ, ದಿವಾಕರ, ಆಶಾ, ರಾಘವೇಂದ್ರ ಬಾಳಿಗ, ಉಮಾ ಸಹಕರಿಸಿದರು. ಅಮಿತಾ ಅಶೋಕ್ ನಿರೂಪಣೆ ಮಾಡಿದರು. ಸವಿತಾ ಸ್ವಾಗತಿಸಿ ಜಿ.ಬಾಲಕೃಷ್ಣ ವಂದಿಸಿದರು. ಮಡಂತ್ಯಾರು, ಪುಂಜಾಲಕಟ್ಟೆ ಪರಿಸರದ ಯೋಗಪಟುಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!