25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ್ ಭಟ್, ಪ್ರಶಾಂತ್ ಆಚಾರ್ಯ, ಸಮಿತಿಯ ಜಿಲ್ಲಾ ಚಿಂತನಾಕೂಟ ಪ್ರಮುಖರಾದ ಹರೀಶ್ ಅಂಚನ್, ಶಿಕ್ಷಕರಾದ ಸುಕೇಶ್ ಹಾಗೂ ಸುಧಾಕರ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂಜಾನೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ 3 ಹಂತಗಳಲ್ಲಿ 9 ಬಾರಿ 108 ಸೂರ್ಯ ನಮಸ್ಕಾರ ಸಮಾಪನಗೊಂಡಿತು.
ರಥಸಪ್ತಮಿಯಂದು ಸೂರ್ಯನಮಸ್ಕಾರ ಮಾಡುವ ಮಹತ್ವವನ್ನು ಯೋಗಪಟು ರೂಪಾ ನವೀನ್ ತಿಳಿಸಿದರು. ಸೂರ್ಯನಮಸ್ಕಾರವನ್ನು 3 ಹಂತಗಳಲ್ಲಿ ಕ್ರಮವಾಗಿ ಯೋಗಪಟುಗಳಾದ ಸಿ.ಹೆಚ್. ಶಿವಶಂಕರ ಛತ್ರ,ಕುಮಾರಿ ಕೀರ್ತಿ, ನವೀನ್ ಕುಮಾರ್ ನಡೆಸಿಕೊಟ್ಟರು.

ಆರಂಭಿಕ ಸಿದ್ದತೆಯನ್ನು ಭಾರತಿ ಸುರೇಶ್ ನೆರವೇರಿಸಿದರು. ಪ್ರಾತ್ಯಕ್ಷಿತೆಯಲ್ಲಿ ಯೋಗ ಪಟುಗಳಾದ ಸರಿತಾ, ಭವಾನಿ, ಕೇಶವ, ದೀಕ್ಷಿತ್, ವಿದ್ಯಾ, ವಿಜಯ, ರಮ್ಯಾ, ದಿವಾಕರ, ಆಶಾ, ರಾಘವೇಂದ್ರ ಬಾಳಿಗ, ಉಮಾ ಸಹಕರಿಸಿದರು. ಅಮಿತಾ ಅಶೋಕ್ ನಿರೂಪಣೆ ಮಾಡಿದರು. ಸವಿತಾ ಸ್ವಾಗತಿಸಿ ಜಿ.ಬಾಲಕೃಷ್ಣ ವಂದಿಸಿದರು. ಮಡಂತ್ಯಾರು, ಪುಂಜಾಲಕಟ್ಟೆ ಪರಿಸರದ ಯೋಗಪಟುಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!