22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

ಅರಸಿನಮಕ್ಕಿ : ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿರುವ ಭಾರತದ ಸುಂದರವಾದ, ಮೌಲ್ಯಯುತ ಕೌಟುಂಬಿಕ ವ್ಯವಸ್ಥೆಯನ್ನು ಪಾಶ್ಚಿಮಾತ್ಯ ದೇಶಗಳು ಹಾಡಿ ಹೊಗಳುತ್ತಿವೆ. ಈ ವ್ಯವಸ್ಥೆಯನ್ನು ಉಳಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಆರ್ ಎಸ್ ಎಸ್ ಕುಟುಂಬ ಪ್ರಬೋಧನ್ ವಿಭಾಗ ಸಂಯೋಜಕ್ ಗುರುರಾಜ್ ರಾವ್ ಕೋಟೇಶ್ವರ ಹೇಳಿದ್ದಾರೆ.

ಅವರು ಇಲ್ಲಿನ ಕೇಂದ್ರ ಮೈದಾನದಲ್ಲಿ ಜ. 25ರಂದು ನಡೆದ ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ಗ್ರಾಮ ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿದರು.


ಕುಟುಂಬ ಜೀವನದ ಬೇರುಗಳು ಶಿಥಿಲಗೊಂಡರೆ ಇಡೀ ಹಿಂದು ಸಮಾಜವೇ ಸೊರಗುತ್ತದೆ. ಅವಿಭಕ್ತ ಕುಟುಂಬ ನಮ್ಮ ಧರ್ಮದ ಶಕ್ತಿ. ಕುಟುಂಬದಲ್ಲಿ ಯಾರೂ ಬೇರೆ ಬೇರೆಯಾಗದೆ ಒಟ್ಟಿಗೆ ಜೀವನ ಸಾಗಿಸಬೇಕು. ಜೀವನ ಮೌಲ್ಯಗಳು, ನೈತಿಕತೆ, ಸಂಸ್ಕಾರವನ್ನು ಮಕ್ಕಳಲ್ಲಿ ಬೆಳೆಸಬೇಕು. ಹಣ ಸಂಪಾದನೆಯ ಭರದಲ್ಲಿ ಕುಟುಂಬ ಜೀವನದ ನೆಮ್ಮದಿಯನ್ನು ಕಳೆದುಕೊಳ್ಳಬಾರದು. ನಗರ ವ್ಯಾಮೋಹದಿಂದ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಹಿಂದೂ ಧರ್ಮಕ್ಕೆ ಮಾರಕ ಎಂದು ಹೇಳಿದರು.

ಚೇತನಾ ಚಂದ್ರಶೇಖರ್ ಶಿಶಿಲ, ಉದ್ಯಮಿ ವಾಮನ ತಾಮನ್ ಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಹಿಂದೂ ಸಂಗಮ ಆಯೋಜನಾ ಸಮಿತಿಯ ಸಂಯೋಜಕರಾದ ರಾಘವೇಂದ್ರ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಶೋಕ ಪತ್ತಿಮಾರು, ಹಿಂದು ಸಂಗಮ ತಾಲೂಕು ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ ಉಪಸ್ಥಿತರಿದ್ದರು.
ಹಿಂದು ಸಂಗಮ ತಾಲೂಕು ಸಮಿತಿ ಸದಸ್ಯ ವೃಷಾಂಕ್ ಖಾಡಿಲ್ಕರ್ ಸ್ವಾಗತಿಸಿ ಪ್ರಸ್ತಾವನೆಗೈದರು. ಗಣೇಶ್ ಕೆ. ಹೊಸ್ತೋಟ ವಂದಿಸಿದರು.

ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರು ಪ್ರತಿ ಮನೆಗೆ ಒಂದರಂತೆ ಭಗವದ್ಗೀತೆ ಪುಸ್ತಕಗಳನ್ನು ಉಚಿತವಾಗಿ ನೀಡಿದರು. ಅರಸಿನಮಕ್ಕಿ ಮಂಡಲದ ಮಾತೆಯರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತ್ಯಾಂಪಣ್ಣಶೆಟ್ಟಿಗಾ‌ರ್ ಮತ್ತು ರೇಣುಕಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮೊದಲು ಸ್ನೇಹ ಸನ್ನಿಧಿಯಿಂದ ಕೇಂದ್ರ ಮೈದಾನವರೆಗೆ ವೈಭವದ ಶೋಭಯಾತ್ರೆ ನಡೆಯಿತು.

Related posts

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya
error: Content is protected !!