September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

ಕಲ್ಮoಜ: ಇಲ್ಲಿಯ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ, ಕರ್ನಾಟಕ ಸಾವಯವ ಕೃಷಿ ಯೋಜನೆ ರಾಜ್ಯ ಆಡಳಿತ ನಿರ್ದೇಶಕ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಮೋಹನ ಗೌಡ ಕಲ್ಮoಜ ರವರಿಂದ ರೂ.25 ಸಾವಿರ ಮೌಲ್ಯದ ಇನ್ವಾರ್ಟರ್ ಕೊಡುಗೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಮೋಹನ ಗೌಡ ರವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ ಬಗ್ಗೆ ಮಕ್ಕಳ ಶಿಕ್ಷಣ ಅಧ್ಯಾಪಕರ ಬಗ್ಗೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ತಾನು ಈ ಶಾಲೆಯಲ್ಲಿ ಕಲಿತು ರಾಜ್ಯಮಟ್ಟದ ಉದ್ಯಮಿ ಆಗಿದ್ದೇನೆ ರಾಜಕೀಯ ಸಾಮಾಜಿಕ ಕೃಷಿ, ಧಾರ್ಮಿಕ ಸೇವಾ ಸಂಘಟನೆಯಲ್ಲಿ ತೊಡಗಿಸಲು ಪ್ರೇರಣೆ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗಾಗಿ ಸಂವಿಧಾನ ದಿನ ವಾದ ಗಣರಾಜ್ಯ ದಿನ ನಮ್ಮ ಶಾಲೆಗೆ ಏನಾದ್ರು ಕೊಡುಗೆ ನೀಡಬೇಕು ಎನ್ನುವ ಆಶಯ ಮತ್ತು ನಮ್ಮ ಶಾಲೆ ಸದಾ ನಮ್ಮೊಂದಿಗೆ ಉಳಿಯಬೇಕು. ಸಮಾಜದಲ್ಲಿ ಸಾಧನೆ ಮಾಡುವ ಪ್ರತಿಯೊಬ್ಬ ಸಾಧಕನ ಹಿಂದೆ ನಮ್ಮ ಸರಕಾರಿ ಕನ್ನಡ ಶಾಲೆಯ ಅಧ್ಯಾಪಕರ ಪಾತ್ರ ದೊಡ್ಡದು ಎಂದು ಹೇಳಿದರು.

ಶಾಲಾ ಸಮಿತಿಯಿಂದ ಹಳೆ ವಿದ್ಯಾರ್ಥಿ ಮೋಹನ್ ಗೌಡರ ಸಾಧನೆಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಎಲ್ಲಾ ಶಿಕ್ಷಕರು, ಶಾಲಾಭಿರುದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಊರಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya
error: Content is protected !!