22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

ಕಲ್ಮoಜ: ಇಲ್ಲಿಯ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ, ಕರ್ನಾಟಕ ಸಾವಯವ ಕೃಷಿ ಯೋಜನೆ ರಾಜ್ಯ ಆಡಳಿತ ನಿರ್ದೇಶಕ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಮೋಹನ ಗೌಡ ಕಲ್ಮoಜ ರವರಿಂದ ರೂ.25 ಸಾವಿರ ಮೌಲ್ಯದ ಇನ್ವಾರ್ಟರ್ ಕೊಡುಗೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಮೋಹನ ಗೌಡ ರವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ ಬಗ್ಗೆ ಮಕ್ಕಳ ಶಿಕ್ಷಣ ಅಧ್ಯಾಪಕರ ಬಗ್ಗೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ತಾನು ಈ ಶಾಲೆಯಲ್ಲಿ ಕಲಿತು ರಾಜ್ಯಮಟ್ಟದ ಉದ್ಯಮಿ ಆಗಿದ್ದೇನೆ ರಾಜಕೀಯ ಸಾಮಾಜಿಕ ಕೃಷಿ, ಧಾರ್ಮಿಕ ಸೇವಾ ಸಂಘಟನೆಯಲ್ಲಿ ತೊಡಗಿಸಲು ಪ್ರೇರಣೆ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗಾಗಿ ಸಂವಿಧಾನ ದಿನ ವಾದ ಗಣರಾಜ್ಯ ದಿನ ನಮ್ಮ ಶಾಲೆಗೆ ಏನಾದ್ರು ಕೊಡುಗೆ ನೀಡಬೇಕು ಎನ್ನುವ ಆಶಯ ಮತ್ತು ನಮ್ಮ ಶಾಲೆ ಸದಾ ನಮ್ಮೊಂದಿಗೆ ಉಳಿಯಬೇಕು. ಸಮಾಜದಲ್ಲಿ ಸಾಧನೆ ಮಾಡುವ ಪ್ರತಿಯೊಬ್ಬ ಸಾಧಕನ ಹಿಂದೆ ನಮ್ಮ ಸರಕಾರಿ ಕನ್ನಡ ಶಾಲೆಯ ಅಧ್ಯಾಪಕರ ಪಾತ್ರ ದೊಡ್ಡದು ಎಂದು ಹೇಳಿದರು.

ಶಾಲಾ ಸಮಿತಿಯಿಂದ ಹಳೆ ವಿದ್ಯಾರ್ಥಿ ಮೋಹನ್ ಗೌಡರ ಸಾಧನೆಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಎಲ್ಲಾ ಶಿಕ್ಷಕರು, ಶಾಲಾಭಿರುದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಊರಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya
error: Content is protected !!