24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ವಲಯ ಘಟಕ ಅಶೋಕನಗರ ಧರ್ಮಸ್ಥಳದಲ್ಲಿ 77ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು. ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಇವರು ದೀಪ ಬೆಳಗಿಸಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭಹಾರೈಸಿದರು.

ಮಡಂತ್ಯಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ ಮಾತನಾಡಿ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದಾದ ಭ್ರಾತೃತ್ವ ಪದವನ್ನು ಸರಿಯಾಗಿ ಅರ್ಥೈಸಿಕೊಂಡು ಎಲ್ಲರೂ ಸಹೋದರತೆಯಿಂದ ಬದುಕಿದಲ್ಲಿ ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಸೃಷ್ಠಿಯಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ನಮಗೆ ಕೇವಲ ಹಕ್ಕುಗಳನ್ನು ಮಾತ್ರ ತಿಳಿಸಿಲ್ಲ ಜೊತೆಯಲ್ಲಿ ಕರ್ತವ್ಯಗಳನ್ನು ಕೂಡಾ ತಿಳಿಸಿದೆ. ಈ ಕರ್ತವ್ಯಗಳನ್ನು ತಿಳಿದುಕೊಂಡು ಸಂವಿಧಾನಬದ್ಧವಾಗಿ ಜೀವನ ನಡೆಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿ ಸಂವಿಧಾನದ ಮಹತ್ವವನ್ನು ವಿವರಿಸಿದರು. ವಲಯ ಘಟಕದ ಅಧ್ಯಕ್ಷ ಗಣೇಶ್ ಡಿ. ಅಧ್ಯಕ್ಷತೆ ವಹಿಸಿ ಗಣರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ಜೀವನದಲ್ಲಿ ಸಂವಿಧಾನದ ಮಹತ್ವವನ್ನು ಅನುಸರಿಸಬೇಕು ಎಂದು ತಿಳಿಸಿದರು.

೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಆದಿದ್ರಾವಿಡ ಸಮಾಜ ಸೇವಾ ಸಂಘದ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು. ಅಶೋಕನಗರದ ಕರಿಯ ಗುರಿಕಾರ ಹಾಗೂ ಸದಾಶಿವ ಗುರಿಕಾರ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂಗೀತ ಹಾಗೂ ಜ್ಯೋತಿ ಬುದ್ಧಗೀತೆ ಹಾಡಿದರು. ಶಶಿಕಲಾ ಸ್ವಾಗತಿಸಿ, ಅನಿತಾ ಧನ್ಯವಾದವಿತ್ತರು. ಸುನೀತಾ ಡಿ.ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!