ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ಇಲ್ಲಿನ ಗಣರಾಜ್ಯ ದಿನ ಪಥ ಸಂಚಾಲನದ ಮೂಲಕ ಬಹಳ ವಿಜೃಂಭಣೆಯಿಂದ ನಡೆಯಿತು.

ವೇಣೂರು ಶ್ರೀ ರಾಮ ಭಜನಾ ಮಂದಿರ ದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಥ ಸಂಚಲನದ ಮಾಡುದರ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು. ನಂತರ ಶಾಲೆಯಲ್ಲಿ ಶಾಲಾ ಪೂರ್ವ ಪ್ರಾಥಮಿಕ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ,ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಮತ್ತು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಧ್ವಜರೋಹಣ ನೆರವೇರಿಸಿದರು.

ಪ್ರೌಢಶಾಲಾ ವಿಭಾಗದ ಸಮಾಜ ಶಿಕ್ಷಕಿ ಕುಮಾರಿ ಅನುಷಾ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ , ಕುಂಭಶ್ರೀ ಪದವಿಪೂರ್ವ ಕಾಲೇಜಿನ ಆಡಳಿತ ಅಧಿಕಾರಿ ಮನೋಜ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್, ಉಪನ್ಯಾಸಕರು ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಶರಣ್ಯ ನಿರೂಪಿಸಿದರು . ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ಮಗಳ ವಿವಾಹದ ಪ್ರಯುಕ್ತ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ನೀಡಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya
error: Content is protected !!