38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ್ ಭಟ್, ಪ್ರಶಾಂತ್ ಆಚಾರ್ಯ, ಸಮಿತಿಯ ಜಿಲ್ಲಾ ಚಿಂತನಾಕೂಟ ಪ್ರಮುಖರಾದ ಹರೀಶ್ ಅಂಚನ್, ಶಿಕ್ಷಕರಾದ ಸುಕೇಶ್ ಹಾಗೂ ಸುಧಾಕರ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂಜಾನೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ 3 ಹಂತಗಳಲ್ಲಿ 9 ಬಾರಿ 108 ಸೂರ್ಯ ನಮಸ್ಕಾರ ಸಮಾಪನಗೊಂಡಿತು.
ರಥಸಪ್ತಮಿಯಂದು ಸೂರ್ಯನಮಸ್ಕಾರ ಮಾಡುವ ಮಹತ್ವವನ್ನು ಯೋಗಪಟು ರೂಪಾ ನವೀನ್ ತಿಳಿಸಿದರು. ಸೂರ್ಯನಮಸ್ಕಾರವನ್ನು 3 ಹಂತಗಳಲ್ಲಿ ಕ್ರಮವಾಗಿ ಯೋಗಪಟುಗಳಾದ ಸಿ.ಹೆಚ್. ಶಿವಶಂಕರ ಛತ್ರ,ಕುಮಾರಿ ಕೀರ್ತಿ, ನವೀನ್ ಕುಮಾರ್ ನಡೆಸಿಕೊಟ್ಟರು.

ಆರಂಭಿಕ ಸಿದ್ದತೆಯನ್ನು ಭಾರತಿ ಸುರೇಶ್ ನೆರವೇರಿಸಿದರು. ಪ್ರಾತ್ಯಕ್ಷಿತೆಯಲ್ಲಿ ಯೋಗ ಪಟುಗಳಾದ ಸರಿತಾ, ಭವಾನಿ, ಕೇಶವ, ದೀಕ್ಷಿತ್, ವಿದ್ಯಾ, ವಿಜಯ, ರಮ್ಯಾ, ದಿವಾಕರ, ಆಶಾ, ರಾಘವೇಂದ್ರ ಬಾಳಿಗ, ಉಮಾ ಸಹಕರಿಸಿದರು. ಅಮಿತಾ ಅಶೋಕ್ ನಿರೂಪಣೆ ಮಾಡಿದರು. ಸವಿತಾ ಸ್ವಾಗತಿಸಿ ಜಿ.ಬಾಲಕೃಷ್ಣ ವಂದಿಸಿದರು. ಮಡಂತ್ಯಾರು, ಪುಂಜಾಲಕಟ್ಟೆ ಪರಿಸರದ ಯೋಗಪಟುಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya
error: Content is protected !!