22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ್ ಭಟ್, ಪ್ರಶಾಂತ್ ಆಚಾರ್ಯ, ಸಮಿತಿಯ ಜಿಲ್ಲಾ ಚಿಂತನಾಕೂಟ ಪ್ರಮುಖರಾದ ಹರೀಶ್ ಅಂಚನ್, ಶಿಕ್ಷಕರಾದ ಸುಕೇಶ್ ಹಾಗೂ ಸುಧಾಕರ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂಜಾನೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ 3 ಹಂತಗಳಲ್ಲಿ 9 ಬಾರಿ 108 ಸೂರ್ಯ ನಮಸ್ಕಾರ ಸಮಾಪನಗೊಂಡಿತು.
ರಥಸಪ್ತಮಿಯಂದು ಸೂರ್ಯನಮಸ್ಕಾರ ಮಾಡುವ ಮಹತ್ವವನ್ನು ಯೋಗಪಟು ರೂಪಾ ನವೀನ್ ತಿಳಿಸಿದರು. ಸೂರ್ಯನಮಸ್ಕಾರವನ್ನು 3 ಹಂತಗಳಲ್ಲಿ ಕ್ರಮವಾಗಿ ಯೋಗಪಟುಗಳಾದ ಸಿ.ಹೆಚ್. ಶಿವಶಂಕರ ಛತ್ರ,ಕುಮಾರಿ ಕೀರ್ತಿ, ನವೀನ್ ಕುಮಾರ್ ನಡೆಸಿಕೊಟ್ಟರು.

ಆರಂಭಿಕ ಸಿದ್ದತೆಯನ್ನು ಭಾರತಿ ಸುರೇಶ್ ನೆರವೇರಿಸಿದರು. ಪ್ರಾತ್ಯಕ್ಷಿತೆಯಲ್ಲಿ ಯೋಗ ಪಟುಗಳಾದ ಸರಿತಾ, ಭವಾನಿ, ಕೇಶವ, ದೀಕ್ಷಿತ್, ವಿದ್ಯಾ, ವಿಜಯ, ರಮ್ಯಾ, ದಿವಾಕರ, ಆಶಾ, ರಾಘವೇಂದ್ರ ಬಾಳಿಗ, ಉಮಾ ಸಹಕರಿಸಿದರು. ಅಮಿತಾ ಅಶೋಕ್ ನಿರೂಪಣೆ ಮಾಡಿದರು. ಸವಿತಾ ಸ್ವಾಗತಿಸಿ ಜಿ.ಬಾಲಕೃಷ್ಣ ವಂದಿಸಿದರು. ಮಡಂತ್ಯಾರು, ಪುಂಜಾಲಕಟ್ಟೆ ಪರಿಸರದ ಯೋಗಪಟುಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya
error: Content is protected !!