25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ್ ಭಟ್, ಪ್ರಶಾಂತ್ ಆಚಾರ್ಯ, ಸಮಿತಿಯ ಜಿಲ್ಲಾ ಚಿಂತನಾಕೂಟ ಪ್ರಮುಖರಾದ ಹರೀಶ್ ಅಂಚನ್, ಶಿಕ್ಷಕರಾದ ಸುಕೇಶ್ ಹಾಗೂ ಸುಧಾಕರ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂಜಾನೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ 3 ಹಂತಗಳಲ್ಲಿ 9 ಬಾರಿ 108 ಸೂರ್ಯ ನಮಸ್ಕಾರ ಸಮಾಪನಗೊಂಡಿತು.
ರಥಸಪ್ತಮಿಯಂದು ಸೂರ್ಯನಮಸ್ಕಾರ ಮಾಡುವ ಮಹತ್ವವನ್ನು ಯೋಗಪಟು ರೂಪಾ ನವೀನ್ ತಿಳಿಸಿದರು. ಸೂರ್ಯನಮಸ್ಕಾರವನ್ನು 3 ಹಂತಗಳಲ್ಲಿ ಕ್ರಮವಾಗಿ ಯೋಗಪಟುಗಳಾದ ಸಿ.ಹೆಚ್. ಶಿವಶಂಕರ ಛತ್ರ,ಕುಮಾರಿ ಕೀರ್ತಿ, ನವೀನ್ ಕುಮಾರ್ ನಡೆಸಿಕೊಟ್ಟರು.

ಆರಂಭಿಕ ಸಿದ್ದತೆಯನ್ನು ಭಾರತಿ ಸುರೇಶ್ ನೆರವೇರಿಸಿದರು. ಪ್ರಾತ್ಯಕ್ಷಿತೆಯಲ್ಲಿ ಯೋಗ ಪಟುಗಳಾದ ಸರಿತಾ, ಭವಾನಿ, ಕೇಶವ, ದೀಕ್ಷಿತ್, ವಿದ್ಯಾ, ವಿಜಯ, ರಮ್ಯಾ, ದಿವಾಕರ, ಆಶಾ, ರಾಘವೇಂದ್ರ ಬಾಳಿಗ, ಉಮಾ ಸಹಕರಿಸಿದರು. ಅಮಿತಾ ಅಶೋಕ್ ನಿರೂಪಣೆ ಮಾಡಿದರು. ಸವಿತಾ ಸ್ವಾಗತಿಸಿ ಜಿ.ಬಾಲಕೃಷ್ಣ ವಂದಿಸಿದರು. ಮಡಂತ್ಯಾರು, ಪುಂಜಾಲಕಟ್ಟೆ ಪರಿಸರದ ಯೋಗಪಟುಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya
error: Content is protected !!