23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

ಅರಸಿನಮಕ್ಕಿ : ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿರುವ ಭಾರತದ ಸುಂದರವಾದ, ಮೌಲ್ಯಯುತ ಕೌಟುಂಬಿಕ ವ್ಯವಸ್ಥೆಯನ್ನು ಪಾಶ್ಚಿಮಾತ್ಯ ದೇಶಗಳು ಹಾಡಿ ಹೊಗಳುತ್ತಿವೆ. ಈ ವ್ಯವಸ್ಥೆಯನ್ನು ಉಳಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಆರ್ ಎಸ್ ಎಸ್ ಕುಟುಂಬ ಪ್ರಬೋಧನ್ ವಿಭಾಗ ಸಂಯೋಜಕ್ ಗುರುರಾಜ್ ರಾವ್ ಕೋಟೇಶ್ವರ ಹೇಳಿದ್ದಾರೆ.

ಅವರು ಇಲ್ಲಿನ ಕೇಂದ್ರ ಮೈದಾನದಲ್ಲಿ ಜ. 25ರಂದು ನಡೆದ ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ಗ್ರಾಮ ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿದರು.


ಕುಟುಂಬ ಜೀವನದ ಬೇರುಗಳು ಶಿಥಿಲಗೊಂಡರೆ ಇಡೀ ಹಿಂದು ಸಮಾಜವೇ ಸೊರಗುತ್ತದೆ. ಅವಿಭಕ್ತ ಕುಟುಂಬ ನಮ್ಮ ಧರ್ಮದ ಶಕ್ತಿ. ಕುಟುಂಬದಲ್ಲಿ ಯಾರೂ ಬೇರೆ ಬೇರೆಯಾಗದೆ ಒಟ್ಟಿಗೆ ಜೀವನ ಸಾಗಿಸಬೇಕು. ಜೀವನ ಮೌಲ್ಯಗಳು, ನೈತಿಕತೆ, ಸಂಸ್ಕಾರವನ್ನು ಮಕ್ಕಳಲ್ಲಿ ಬೆಳೆಸಬೇಕು. ಹಣ ಸಂಪಾದನೆಯ ಭರದಲ್ಲಿ ಕುಟುಂಬ ಜೀವನದ ನೆಮ್ಮದಿಯನ್ನು ಕಳೆದುಕೊಳ್ಳಬಾರದು. ನಗರ ವ್ಯಾಮೋಹದಿಂದ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಹಿಂದೂ ಧರ್ಮಕ್ಕೆ ಮಾರಕ ಎಂದು ಹೇಳಿದರು.

ಚೇತನಾ ಚಂದ್ರಶೇಖರ್ ಶಿಶಿಲ, ಉದ್ಯಮಿ ವಾಮನ ತಾಮನ್ ಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಹಿಂದೂ ಸಂಗಮ ಆಯೋಜನಾ ಸಮಿತಿಯ ಸಂಯೋಜಕರಾದ ರಾಘವೇಂದ್ರ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಶೋಕ ಪತ್ತಿಮಾರು, ಹಿಂದು ಸಂಗಮ ತಾಲೂಕು ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ ಉಪಸ್ಥಿತರಿದ್ದರು.
ಹಿಂದು ಸಂಗಮ ತಾಲೂಕು ಸಮಿತಿ ಸದಸ್ಯ ವೃಷಾಂಕ್ ಖಾಡಿಲ್ಕರ್ ಸ್ವಾಗತಿಸಿ ಪ್ರಸ್ತಾವನೆಗೈದರು. ಗಣೇಶ್ ಕೆ. ಹೊಸ್ತೋಟ ವಂದಿಸಿದರು.

ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರು ಪ್ರತಿ ಮನೆಗೆ ಒಂದರಂತೆ ಭಗವದ್ಗೀತೆ ಪುಸ್ತಕಗಳನ್ನು ಉಚಿತವಾಗಿ ನೀಡಿದರು. ಅರಸಿನಮಕ್ಕಿ ಮಂಡಲದ ಮಾತೆಯರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತ್ಯಾಂಪಣ್ಣಶೆಟ್ಟಿಗಾ‌ರ್ ಮತ್ತು ರೇಣುಕಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮೊದಲು ಸ್ನೇಹ ಸನ್ನಿಧಿಯಿಂದ ಕೇಂದ್ರ ಮೈದಾನವರೆಗೆ ವೈಭವದ ಶೋಭಯಾತ್ರೆ ನಡೆಯಿತು.

Related posts

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya
error: Content is protected !!