25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

ಕಲ್ಮoಜ: ಇಲ್ಲಿಯ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ, ಕರ್ನಾಟಕ ಸಾವಯವ ಕೃಷಿ ಯೋಜನೆ ರಾಜ್ಯ ಆಡಳಿತ ನಿರ್ದೇಶಕ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಮೋಹನ ಗೌಡ ಕಲ್ಮoಜ ರವರಿಂದ ರೂ.25 ಸಾವಿರ ಮೌಲ್ಯದ ಇನ್ವಾರ್ಟರ್ ಕೊಡುಗೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಮೋಹನ ಗೌಡ ರವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ ಬಗ್ಗೆ ಮಕ್ಕಳ ಶಿಕ್ಷಣ ಅಧ್ಯಾಪಕರ ಬಗ್ಗೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ತಾನು ಈ ಶಾಲೆಯಲ್ಲಿ ಕಲಿತು ರಾಜ್ಯಮಟ್ಟದ ಉದ್ಯಮಿ ಆಗಿದ್ದೇನೆ ರಾಜಕೀಯ ಸಾಮಾಜಿಕ ಕೃಷಿ, ಧಾರ್ಮಿಕ ಸೇವಾ ಸಂಘಟನೆಯಲ್ಲಿ ತೊಡಗಿಸಲು ಪ್ರೇರಣೆ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗಾಗಿ ಸಂವಿಧಾನ ದಿನ ವಾದ ಗಣರಾಜ್ಯ ದಿನ ನಮ್ಮ ಶಾಲೆಗೆ ಏನಾದ್ರು ಕೊಡುಗೆ ನೀಡಬೇಕು ಎನ್ನುವ ಆಶಯ ಮತ್ತು ನಮ್ಮ ಶಾಲೆ ಸದಾ ನಮ್ಮೊಂದಿಗೆ ಉಳಿಯಬೇಕು. ಸಮಾಜದಲ್ಲಿ ಸಾಧನೆ ಮಾಡುವ ಪ್ರತಿಯೊಬ್ಬ ಸಾಧಕನ ಹಿಂದೆ ನಮ್ಮ ಸರಕಾರಿ ಕನ್ನಡ ಶಾಲೆಯ ಅಧ್ಯಾಪಕರ ಪಾತ್ರ ದೊಡ್ಡದು ಎಂದು ಹೇಳಿದರು.

ಶಾಲಾ ಸಮಿತಿಯಿಂದ ಹಳೆ ವಿದ್ಯಾರ್ಥಿ ಮೋಹನ್ ಗೌಡರ ಸಾಧನೆಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಎಲ್ಲಾ ಶಿಕ್ಷಕರು, ಶಾಲಾಭಿರುದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಊರಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!