September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ವಲಯ ಘಟಕ ಅಶೋಕನಗರ ಧರ್ಮಸ್ಥಳದಲ್ಲಿ 77ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು. ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಇವರು ದೀಪ ಬೆಳಗಿಸಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭಹಾರೈಸಿದರು.

ಮಡಂತ್ಯಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ ಮಾತನಾಡಿ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದಾದ ಭ್ರಾತೃತ್ವ ಪದವನ್ನು ಸರಿಯಾಗಿ ಅರ್ಥೈಸಿಕೊಂಡು ಎಲ್ಲರೂ ಸಹೋದರತೆಯಿಂದ ಬದುಕಿದಲ್ಲಿ ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಸೃಷ್ಠಿಯಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ನಮಗೆ ಕೇವಲ ಹಕ್ಕುಗಳನ್ನು ಮಾತ್ರ ತಿಳಿಸಿಲ್ಲ ಜೊತೆಯಲ್ಲಿ ಕರ್ತವ್ಯಗಳನ್ನು ಕೂಡಾ ತಿಳಿಸಿದೆ. ಈ ಕರ್ತವ್ಯಗಳನ್ನು ತಿಳಿದುಕೊಂಡು ಸಂವಿಧಾನಬದ್ಧವಾಗಿ ಜೀವನ ನಡೆಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿ ಸಂವಿಧಾನದ ಮಹತ್ವವನ್ನು ವಿವರಿಸಿದರು. ವಲಯ ಘಟಕದ ಅಧ್ಯಕ್ಷ ಗಣೇಶ್ ಡಿ. ಅಧ್ಯಕ್ಷತೆ ವಹಿಸಿ ಗಣರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ಜೀವನದಲ್ಲಿ ಸಂವಿಧಾನದ ಮಹತ್ವವನ್ನು ಅನುಸರಿಸಬೇಕು ಎಂದು ತಿಳಿಸಿದರು.

೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಆದಿದ್ರಾವಿಡ ಸಮಾಜ ಸೇವಾ ಸಂಘದ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು. ಅಶೋಕನಗರದ ಕರಿಯ ಗುರಿಕಾರ ಹಾಗೂ ಸದಾಶಿವ ಗುರಿಕಾರ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂಗೀತ ಹಾಗೂ ಜ್ಯೋತಿ ಬುದ್ಧಗೀತೆ ಹಾಡಿದರು. ಶಶಿಕಲಾ ಸ್ವಾಗತಿಸಿ, ಅನಿತಾ ಧನ್ಯವಾದವಿತ್ತರು. ಸುನೀತಾ ಡಿ.ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!