22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

ಬೆಳ್ತಂಗಡಿ: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ಇದೇ ಬರುವ ಜ.30 ರಂದು ಪ್ರಪ್ರಥಮ ಬಾರಿಗೆ ಜಗತ್ತಿನಾದ್ಯಂತ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಟೈಟಲ್ ಸ್ಪಾನ್ಸರ್ ಆಗಿ ಹೆಸರಾಂತ ಅಮೃತ್ ನೋನಿ ಮತ್ತು ಐಸ್ ಕ್ರೀಮ್ ಪಾರ್ಟರ್ ಆಗಿ ಹ್ಯಾಂಗ್ಯೊ ಐಸ್ ಕ್ರೀಮ್ ಜೊತೆಯಾಗಿದ್ದಾರೆ.

ಗ್ರಾಮೀಣ ಬದುಕಿನ ಸೊಗಡು, ಹಾಸ್ಯ, ಭಾವನೆ ಮತ್ತು ಸಮಾಜದ ನೈಜ ಮುಖವನ್ನು ಒಳಗೊಂಡ ಕಥಾವಸ್ತುವನ್ನು ಹೊಂದಿರುವ ಚಿತ್ರ ಸಂಪೂರ್ಣ ಜವಾರಿ ಭಾಷೆಯಲ್ಲಿ ಮೂಡಿ ಬಂದಿದ್ದು ತಂಡ ಯುವ ಮತ್ತು ಅನುಭವಿ ಕಲಾವಿದರನ್ನ ಒಳಗೊಂಡಿದೆ.

ಕೆ.ರತ್ನಾಕರ ಕಾಮತ್ ಮತ್ತು ಗಣೇಶ್ ಆರ್ ಕಾಮತ್ ಕೆ ನಿರ್ಮಾಣದಲ್ಲಿ, ಕಾಮಿಡಿ ಕಿಲಾಡಿ ಖ್ಯಾತಿಯ ಜಿ.ಜಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು’ದಸ್ಕತ್’ ಸಿನಿಮಾ ನಿರ್ದೇಶಿಸಿದ ಯುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಸಂತೋಷ್ ಗುಂಪಲಾಜೆ ಮತ್ತು ದೀಕ್ಷಿತ್ ಧರ್ಮಸ್ಥಳ ಛಾಯಗ್ರಹಣವಿದ್ದು,‌ ಚಿತ್ರಕ್ಕೆ ಕಿಶೋರ್ ಶೆಟ್ಟಿ, ಸಮರ್ಥನ್ ರಾವ್ ಸಂಗೀತವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಸೌಮ್ಯ ಡಿ ಗೌಡ ಮತ್ತು ಕ್ರಿಯೇಟಿವ್ ಹೆಡ್ ಆಗಿ ಸ್ಮಿತೇಶ್ ಎಸ್ ಬಾರ್ಯ ಕೆಲಸ ಮಾಡಿದ್ದು ತಂಡದಲ್ಲಿ ಚಿದಾನಂದ ಪೈ, ನಿಶಿತ್ ಶೆಟ್ಟಿ, ಮನೋಜ್ ಆನಂದ್ ,ನೀರಜ್ ಕುಂಜರ್ಪ ಮತ್ತು ಅನೂಪ್ ಭಟ್ ಸಹಕರಿಸಿದ್ದಾರೆ.

ಹಿರಿಯ ಕಲಾವಿದರಾದ ವೈಜಾನಾಥ್ ಬಿರಾದರ್, ಮಿಮಿಕ್ರಿ ಗೋಪಿ, ಪ್ರಿಯಾ ಸವದಿ, ಸೂರಜ್,ಮಲ್ಯ ಬಾಗಲಕೋಟೆ, ಸಂತೋಷ್ ರೋಣ,ಕಾಮಿಡಿ‌ ಕಿಲಾಡಿ ಖ್ಯಾತಿಯ ಜಿ.ಜಿ, ಉಮೇಶ್ ಕಿನ್ನಾಳ್ ದಾನಪ್ಪ, ಸದಾನಂದ ಹೀಗೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ.

ಇದೊಂದು ಸಂಪೂರ್ಣ ಹಾಸ್ಯಮಯ ಚಿತ್ರವಾಗಿದ್ದು ,ದೃಶ್ಯ ವೈಭವ, ನೈಜ ಸಂಭಾಷಣೆಗಳು ಪ್ರೇಕ್ಷಕರನ್ನು ತಮ್ಮದೇ ಲೋಕಕ್ಕೆ ಕರೆದುಕೊಂಡು ಹೋಗಲಿವೆ. ಕಥೆಯ ಹರಿವು ಎಲ್ಲ ವರ್ಗದ ಪ್ರೇಕ್ಷಕರಿಗೂ ಸಂಪರ್ಕ ಸಾಧಿಸುವಂತೆ ಕಟ್ಟಿಕೊಡಲಾಗಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ. ಕುಟುಂಬ ಸಮೇತರಾಗಿ ನೋಡಬಹುದಾದ ಸಂಪೂರ್ಣ ಮನರಂಜನಾ ಚಿತ್ರವಾಗಿದ್ದು ಈಗಾಗಲೇ ಚಿತ್ರದ ಜ್ವಾಲಿ ಸಾಂಗ್ ಲಚ್ಚಿ ಲಚ್ಚಿ ಟಾಕೀಸ್ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ಸೋಷಿಯಲ್ ಮೀಡಿಯದಲ್ಲು ವೈರಲ್ ಆಗಿ ಪ್ರೇಕ್ಷಕರನ್ನ ಸೆಳೆಯುವಲ್ಲಿ ಸಫಲವಾಗಿದೆ.

Related posts

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya
error: Content is protected !!