September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಶಾರದಾ ಮಂಟಪದಲ್ಲಿ ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ” ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಾಸುದೇವ ಆಚಾರ್ಯ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಪಾತ್ರವರ್ಗದಲ್ಲಿ ರಾಮನಾಗಿ ಪ್ರಶಾಂತ ಮುಂಡ್ಕೂರು, ಲಕ್ಷ್ಮಣನಾಗಿ ಆದರ್ಶ ಮೂಡಬಿದರೆ, ವಿಭೀಷಣನಾಗಿ ಪ್ರಶಾಂತ್ ಆಚಾರ್ಯ ಪುತ್ತೂರು, ಹನುಮಂತನಾಗಿ ಈಶ್ವರಪ್ರಸಾದ ನಿಡ್ಲೆ, ರಾವಣನಾಗಿ ಶೀಶ ಮಣಿಲ, ರಾವಣ ದೂತ, ಜಾಂಬವಂತ ಮತ್ತು ಶುಕ್ರಾಚಾರ್ಯನಾಗಿ ಪೆರ್ವೋಡಿ ಅಶೋಕ ಸುಬ್ರಹ್ಮಣ್ಯ ಭಟ್,ಇಂದ್ರಜಿತುವಾಗಿ ಗಣೇಶ ಶೆಟ್ಟಿ ಸಾಣೂರು, ಮಾಯಾ ಸೀತೆಯಾಗಿ ಸುಹಾನ್ ಜೆಪ್ಪಿನಮೊಗರು ಪಾತ್ರ ನಿರ್ವಹಿಸಿದರು. ದೇವಸ್ಥಾನದ ವತಿಯಿಂದ ಭರತ್ ಕುಮಾರ್ ಉಜಿರೆ ಯಕ್ಷಭಾರತಿ ಸಂಸ್ಥೆಯ ಸಂಚಾಲಕ ಮಹೇಶ ಕನ್ಯಾಡಿಯವರನ್ನು ಗೌರವಿಸಿದರು. ರವೀಂದ್ರ ಶೆಟ್ಟಿ ಬಳೆಂಜ ಉಪಸ್ಥಿತರಿದ್ದರು.

Related posts

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!