23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಶಾರದಾ ಮಂಟಪದಲ್ಲಿ ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ” ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಾಸುದೇವ ಆಚಾರ್ಯ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಪಾತ್ರವರ್ಗದಲ್ಲಿ ರಾಮನಾಗಿ ಪ್ರಶಾಂತ ಮುಂಡ್ಕೂರು, ಲಕ್ಷ್ಮಣನಾಗಿ ಆದರ್ಶ ಮೂಡಬಿದರೆ, ವಿಭೀಷಣನಾಗಿ ಪ್ರಶಾಂತ್ ಆಚಾರ್ಯ ಪುತ್ತೂರು, ಹನುಮಂತನಾಗಿ ಈಶ್ವರಪ್ರಸಾದ ನಿಡ್ಲೆ, ರಾವಣನಾಗಿ ಶೀಶ ಮಣಿಲ, ರಾವಣ ದೂತ, ಜಾಂಬವಂತ ಮತ್ತು ಶುಕ್ರಾಚಾರ್ಯನಾಗಿ ಪೆರ್ವೋಡಿ ಅಶೋಕ ಸುಬ್ರಹ್ಮಣ್ಯ ಭಟ್,ಇಂದ್ರಜಿತುವಾಗಿ ಗಣೇಶ ಶೆಟ್ಟಿ ಸಾಣೂರು, ಮಾಯಾ ಸೀತೆಯಾಗಿ ಸುಹಾನ್ ಜೆಪ್ಪಿನಮೊಗರು ಪಾತ್ರ ನಿರ್ವಹಿಸಿದರು. ದೇವಸ್ಥಾನದ ವತಿಯಿಂದ ಭರತ್ ಕುಮಾರ್ ಉಜಿರೆ ಯಕ್ಷಭಾರತಿ ಸಂಸ್ಥೆಯ ಸಂಚಾಲಕ ಮಹೇಶ ಕನ್ಯಾಡಿಯವರನ್ನು ಗೌರವಿಸಿದರು. ರವೀಂದ್ರ ಶೆಟ್ಟಿ ಬಳೆಂಜ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya
error: Content is protected !!