ಯಕ್ಷಭಾರತಿ ಬೆಳ್ತಂಗಡಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಕಲಾಪೋಷಕ, ಉದ್ಯಮಿಗಳಾದ ಮೂಡಬಿದರೆಯ ಶ್ರೀ ಕೆ ಶ್ರೀಪತಿ ಭಟ್ ಆಯ್ಕೆಯಾಗಿದ್ದಾರೆ.
ಮಾ.07 ರಂದು ಉಜಿರೆಯ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸುವುದಾಗಿ ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದ್ದಾರೆ.











