July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ್ ಭಟ್, ಪ್ರಶಾಂತ್ ಆಚಾರ್ಯ, ಸಮಿತಿಯ ಜಿಲ್ಲಾ ಚಿಂತನಾಕೂಟ ಪ್ರಮುಖರಾದ ಹರೀಶ್ ಅಂಚನ್, ಶಿಕ್ಷಕರಾದ ಸುಕೇಶ್ ಹಾಗೂ ಸುಧಾಕರ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂಜಾನೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ 3 ಹಂತಗಳಲ್ಲಿ 9 ಬಾರಿ 108 ಸೂರ್ಯ ನಮಸ್ಕಾರ ಸಮಾಪನಗೊಂಡಿತು.
ರಥಸಪ್ತಮಿಯಂದು ಸೂರ್ಯನಮಸ್ಕಾರ ಮಾಡುವ ಮಹತ್ವವನ್ನು ಯೋಗಪಟು ರೂಪಾ ನವೀನ್ ತಿಳಿಸಿದರು. ಸೂರ್ಯನಮಸ್ಕಾರವನ್ನು 3 ಹಂತಗಳಲ್ಲಿ ಕ್ರಮವಾಗಿ ಯೋಗಪಟುಗಳಾದ ಸಿ.ಹೆಚ್. ಶಿವಶಂಕರ ಛತ್ರ,ಕುಮಾರಿ ಕೀರ್ತಿ, ನವೀನ್ ಕುಮಾರ್ ನಡೆಸಿಕೊಟ್ಟರು.

ಆರಂಭಿಕ ಸಿದ್ದತೆಯನ್ನು ಭಾರತಿ ಸುರೇಶ್ ನೆರವೇರಿಸಿದರು. ಪ್ರಾತ್ಯಕ್ಷಿತೆಯಲ್ಲಿ ಯೋಗ ಪಟುಗಳಾದ ಸರಿತಾ, ಭವಾನಿ, ಕೇಶವ, ದೀಕ್ಷಿತ್, ವಿದ್ಯಾ, ವಿಜಯ, ರಮ್ಯಾ, ದಿವಾಕರ, ಆಶಾ, ರಾಘವೇಂದ್ರ ಬಾಳಿಗ, ಉಮಾ ಸಹಕರಿಸಿದರು. ಅಮಿತಾ ಅಶೋಕ್ ನಿರೂಪಣೆ ಮಾಡಿದರು. ಸವಿತಾ ಸ್ವಾಗತಿಸಿ ಜಿ.ಬಾಲಕೃಷ್ಣ ವಂದಿಸಿದರು. ಮಡಂತ್ಯಾರು, ಪುಂಜಾಲಕಟ್ಟೆ ಪರಿಸರದ ಯೋಗಪಟುಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya
error: Content is protected !!