September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

ಮಚ್ಚಿನ: ಎಸ್. ಪಿ. ವೈ. ಎಸ್. ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 16 ದೇವಾಲಯಗಳಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ್ ಭಟ್, ಪ್ರಶಾಂತ್ ಆಚಾರ್ಯ, ಸಮಿತಿಯ ಜಿಲ್ಲಾ ಚಿಂತನಾಕೂಟ ಪ್ರಮುಖರಾದ ಹರೀಶ್ ಅಂಚನ್, ಶಿಕ್ಷಕರಾದ ಸುಕೇಶ್ ಹಾಗೂ ಸುಧಾಕರ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂಜಾನೆ ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮ 3 ಹಂತಗಳಲ್ಲಿ 9 ಬಾರಿ 108 ಸೂರ್ಯ ನಮಸ್ಕಾರ ಸಮಾಪನಗೊಂಡಿತು.
ರಥಸಪ್ತಮಿಯಂದು ಸೂರ್ಯನಮಸ್ಕಾರ ಮಾಡುವ ಮಹತ್ವವನ್ನು ಯೋಗಪಟು ರೂಪಾ ನವೀನ್ ತಿಳಿಸಿದರು. ಸೂರ್ಯನಮಸ್ಕಾರವನ್ನು 3 ಹಂತಗಳಲ್ಲಿ ಕ್ರಮವಾಗಿ ಯೋಗಪಟುಗಳಾದ ಸಿ.ಹೆಚ್. ಶಿವಶಂಕರ ಛತ್ರ,ಕುಮಾರಿ ಕೀರ್ತಿ, ನವೀನ್ ಕುಮಾರ್ ನಡೆಸಿಕೊಟ್ಟರು.

ಆರಂಭಿಕ ಸಿದ್ದತೆಯನ್ನು ಭಾರತಿ ಸುರೇಶ್ ನೆರವೇರಿಸಿದರು. ಪ್ರಾತ್ಯಕ್ಷಿತೆಯಲ್ಲಿ ಯೋಗ ಪಟುಗಳಾದ ಸರಿತಾ, ಭವಾನಿ, ಕೇಶವ, ದೀಕ್ಷಿತ್, ವಿದ್ಯಾ, ವಿಜಯ, ರಮ್ಯಾ, ದಿವಾಕರ, ಆಶಾ, ರಾಘವೇಂದ್ರ ಬಾಳಿಗ, ಉಮಾ ಸಹಕರಿಸಿದರು. ಅಮಿತಾ ಅಶೋಕ್ ನಿರೂಪಣೆ ಮಾಡಿದರು. ಸವಿತಾ ಸ್ವಾಗತಿಸಿ ಜಿ.ಬಾಲಕೃಷ್ಣ ವಂದಿಸಿದರು. ಮಡಂತ್ಯಾರು, ಪುಂಜಾಲಕಟ್ಟೆ ಪರಿಸರದ ಯೋಗಪಟುಗಳು ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya
error: Content is protected !!