25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು ಹಾಗೂ ಪಂಚಾಯತ್‌ಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಮೂರು ದಿನಗಳೊಳಗೆ ಗುಡಿಸಲುಗಳನ್ನು ತೆರವುಗೊಳಿಸಲಾಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆರು ದಿನಗಳು ಕಳೆದರೂ ಕೂಡ ಗುಡಿಸಲುಗಳನ್ನು ತೆರವುಗೊಳಿಸಲಾಗಿಲ್ಲ.ಗ್ರಾಮ ಸಭೆಯ ನಿರ್ಣಯದಂತೆ, ಗುಡಿಸಲುಗಳನ್ನು ತಕ್ಷಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಆವರಣವನ್ನು ಶುಚಿಗೊಳಿಸಬೇಕೆಂದು ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯ ಹನೀಫ್ ಪುಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು.ಪಿ, ಚಾರ್ಮಾಡಿ ಬ್ರಾಂಚ್ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ ಹಾಗೂ ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya
error: Content is protected !!