30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ, ಸಂಘ (ರಿ) ಬೆಳ್ತಂಗಡಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ, ಬಂಟ್ವಾಳ ಮತ್ತು ಪೊಲೀಸ್ ಇಲಾಖೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಜ.28ರಂದು ಬೆಳ್ತಂಗಡಿ ಎ.ಪಿ.ಎಂ.ಸಿ ಆವರಣದಲ್ಲಿ ಜರುಗಿತು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ಮನು ಬಿ.ಕೆ.ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಈ ದೇಶದ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ದೇಶದ ಕಾನೂನುಗಳನ್ನು ಗೌರವಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಕಾನೂನಿನ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ಕೆ. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮಾತನಾಡಿ, ಸಾಮಾನ್ಯ ಜನರಿಗೆ ರಕ್ಷಣೆ ನೀಡುವ ಉದ್ದೇಶವೇ ಮೋಟಾರು ಕಾನೂನು ಕಾಯ್ದೆ. ಕೆಲವು ಸಂದರ್ಭಗಳಲ್ಲಿ ಭಯ ಪಡಿಸುವ ಕಾನೂನು ಕೂಡ ಅಗತ್ಯ ಇರುತ್ತದೆ. ಮನುಷ್ಯನಿಗೆ ಮನಸ್ಸಿಗಿಂತ ದೊಡ್ಡ ಜಡ್ಜ್ ಬೇರೆ ಇಲ್ಲ ಎಂದು ರಸ್ತೆ ಸುರಕ್ಷತಾ ಕುರಿತು ಕಾನೂನು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕಿಶೋರ್, ಬೆಳ್ತಂಗಡಿ ಸಹಾಯಕ ಸರಕಾರಿ ಅಭಿಯೋಜಕರಾದ ದಿವ್ಯರಾಜ್, ಬಕ್ಕಪ್ಪ ಹೆಚ್ ಭಾಗವಹಿಸಿದರು. ಕಾರ್ಯಕ್ರಮವನ್ನು ಸುಧಾಮಣಿ ಯಶಸ್ವಿಯಾಗಿ ನಿರೂಪಿಸಿದರು.

Related posts

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya
error: Content is protected !!