July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣರವರು ಸ್ವಾಗತಿಸಿ ಪ್ರಸ್ತಾವಿಸಿದರು. ಕೋಶಾಧಿಕಾರಿ ಶ್ರವಣ್ ಕುಮಾರ್‌ರವರು ಲೆಕ್ಕಪತ್ರಗಳನ್ನು ಮಂಡಿಸಿದರು.


ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ಅನಾನುಕೂಲ ಆಗದಂತೆ ಪೂಜಾ ವಿಧಿ ವಿಧಾನಗಳು ಸಮಯ ಶ್ರದ್ಧೆ ಮತ್ತು ಶಿಸ್ತುನಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಫೆಬ್ರವರಿ ೭ರಂದು ನಡೆಯುವ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಬೇಕೆಂದು ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ತಿಳಿಸಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆಯವರನ್ನು ಟ್ರಸ್ಟಿಗೆ ನೂತನವಾಗಿ ಸೇರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ, ಹಿರಿಯ ಟ್ರಸ್ಟಿಗಳಾದ ಪ್ರೊ ಎ. ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಶ್ರೀಮತಿ ಉಮಾ ರಂಜನ್ ರಾವ್, ಮಂಜುನಾಥ ಶೆಟ್ಟಿ, ಕೃಷ್ಣ ಶೆಟ್ಟಿ ಹಾಗೂ ಇತರ ಪ್ರಮುಖರು ಹಾಜರಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!