September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣರವರು ಸ್ವಾಗತಿಸಿ ಪ್ರಸ್ತಾವಿಸಿದರು. ಕೋಶಾಧಿಕಾರಿ ಶ್ರವಣ್ ಕುಮಾರ್‌ರವರು ಲೆಕ್ಕಪತ್ರಗಳನ್ನು ಮಂಡಿಸಿದರು.


ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ಅನಾನುಕೂಲ ಆಗದಂತೆ ಪೂಜಾ ವಿಧಿ ವಿಧಾನಗಳು ಸಮಯ ಶ್ರದ್ಧೆ ಮತ್ತು ಶಿಸ್ತುನಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಫೆಬ್ರವರಿ ೭ರಂದು ನಡೆಯುವ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಬೇಕೆಂದು ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ತಿಳಿಸಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆಯವರನ್ನು ಟ್ರಸ್ಟಿಗೆ ನೂತನವಾಗಿ ಸೇರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ, ಹಿರಿಯ ಟ್ರಸ್ಟಿಗಳಾದ ಪ್ರೊ ಎ. ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಶ್ರೀಮತಿ ಉಮಾ ರಂಜನ್ ರಾವ್, ಮಂಜುನಾಥ ಶೆಟ್ಟಿ, ಕೃಷ್ಣ ಶೆಟ್ಟಿ ಹಾಗೂ ಇತರ ಪ್ರಮುಖರು ಹಾಜರಿದ್ದರು.

Related posts

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya
error: Content is protected !!