ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜ. 27 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು.
2025ರ ಆಯವ್ಯಯವನ್ನು ಮಂಜೂರುಗೊಳಿಸಲಾಯಿತು. ನೂತನ ಮುಂಗಡ ಪತ್ರ, ವಾರ್ಷಿಕ ಕ್ರಿಯಾಯೋಜನೆಯನ್ನು ಸಿದ್ದಗೊಳಿಸಲಾಯಿತು. ಘಟಕ ಪತ್ರಿಕೆ ಕಪಿಲಾ ವಾಣಿಯ ಸಂಪಾದಕರಾದ ಜಸ್ವಂತ್ ಪಿರೇರಾ ಅವರು ಸಂಚಿಕೆಗಳ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೆ ಶ್ರೀಧರ ರಾವ್ ಅವರು ಮಾರ್ಗದರ್ಶನ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್, ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ನಿಕಟಪೂರ್ವ ಅಧ್ಯಕ್ಷರಾದ ಡಾ. ಶೋಭಾ ಪಿ. ಅವರು ಚರ್ಚೆಯಲ್ಲಿ ಭಾಗವಹಿಸಿದರು.
ಅಕ್ಷತ್ ರೈ ಅವರು ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ವಾಚಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.











