23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು ಹಾಗೂ ಪಂಚಾಯತ್‌ಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಮೂರು ದಿನಗಳೊಳಗೆ ಗುಡಿಸಲುಗಳನ್ನು ತೆರವುಗೊಳಿಸಲಾಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆರು ದಿನಗಳು ಕಳೆದರೂ ಕೂಡ ಗುಡಿಸಲುಗಳನ್ನು ತೆರವುಗೊಳಿಸಲಾಗಿಲ್ಲ.ಗ್ರಾಮ ಸಭೆಯ ನಿರ್ಣಯದಂತೆ, ಗುಡಿಸಲುಗಳನ್ನು ತಕ್ಷಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಆವರಣವನ್ನು ಶುಚಿಗೊಳಿಸಬೇಕೆಂದು ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯ ಹನೀಫ್ ಪುಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು.ಪಿ, ಚಾರ್ಮಾಡಿ ಬ್ರಾಂಚ್ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ ಹಾಗೂ ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!