37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ಬೆಳಾಲು ಇದರ ಅಧ್ಯಕ್ಷೆ ಶಾರದಾ, ಕಾರ್ಯದರ್ಶಿ ಉಮಾದೇವಿ, ಪದಾಧಿಕಾರಿಗಳು ಪ್ರೇಮ, ಎಂ.ಬಿ.ಕೆ ಹರಿಣಾಕ್ಷಿ, ಎಲ್.ಸಿ.ಆರ್.ಪಿ ಸರಸ್ವತಿ, ಕೃಷಿ ಸಖಿ ಸ್ವಾತಿ ಹಾಗೂ ಸ್ವಚ್ಛ ಘಟಕದ ಸಿಬ್ಬಂದಿಗಳಾದ ಸುಂದರಿ ಮಾಯಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಾಗರಿಕರು ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಡ್ಡಿ ಬಿಸಾಡದೆ ಸ್ವಚ್ಛತೆಯ ಬಗ್ಗೆ ಜಾಗೃತರಾಗಿರಬೇಕೆನ್ನುವ ಸಂದೇಶವನ್ನು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

Related posts

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya
error: Content is protected !!