July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ, ಸಂಘ (ರಿ) ಬೆಳ್ತಂಗಡಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ, ಬಂಟ್ವಾಳ ಮತ್ತು ಪೊಲೀಸ್ ಇಲಾಖೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಜ.28ರಂದು ಬೆಳ್ತಂಗಡಿ ಎ.ಪಿ.ಎಂ.ಸಿ ಆವರಣದಲ್ಲಿ ಜರುಗಿತು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ಮನು ಬಿ.ಕೆ.ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಈ ದೇಶದ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ದೇಶದ ಕಾನೂನುಗಳನ್ನು ಗೌರವಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಕಾನೂನಿನ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ಕೆ. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮಾತನಾಡಿ, ಸಾಮಾನ್ಯ ಜನರಿಗೆ ರಕ್ಷಣೆ ನೀಡುವ ಉದ್ದೇಶವೇ ಮೋಟಾರು ಕಾನೂನು ಕಾಯ್ದೆ. ಕೆಲವು ಸಂದರ್ಭಗಳಲ್ಲಿ ಭಯ ಪಡಿಸುವ ಕಾನೂನು ಕೂಡ ಅಗತ್ಯ ಇರುತ್ತದೆ. ಮನುಷ್ಯನಿಗೆ ಮನಸ್ಸಿಗಿಂತ ದೊಡ್ಡ ಜಡ್ಜ್ ಬೇರೆ ಇಲ್ಲ ಎಂದು ರಸ್ತೆ ಸುರಕ್ಷತಾ ಕುರಿತು ಕಾನೂನು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕಿಶೋರ್, ಬೆಳ್ತಂಗಡಿ ಸಹಾಯಕ ಸರಕಾರಿ ಅಭಿಯೋಜಕರಾದ ದಿವ್ಯರಾಜ್, ಬಕ್ಕಪ್ಪ ಹೆಚ್ ಭಾಗವಹಿಸಿದರು. ಕಾರ್ಯಕ್ರಮವನ್ನು ಸುಧಾಮಣಿ ಯಶಸ್ವಿಯಾಗಿ ನಿರೂಪಿಸಿದರು.

Related posts

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!