July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣರವರು ಸ್ವಾಗತಿಸಿ ಪ್ರಸ್ತಾವಿಸಿದರು. ಕೋಶಾಧಿಕಾರಿ ಶ್ರವಣ್ ಕುಮಾರ್‌ರವರು ಲೆಕ್ಕಪತ್ರಗಳನ್ನು ಮಂಡಿಸಿದರು.


ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ಅನಾನುಕೂಲ ಆಗದಂತೆ ಪೂಜಾ ವಿಧಿ ವಿಧಾನಗಳು ಸಮಯ ಶ್ರದ್ಧೆ ಮತ್ತು ಶಿಸ್ತುನಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಫೆಬ್ರವರಿ ೭ರಂದು ನಡೆಯುವ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಬೇಕೆಂದು ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ತಿಳಿಸಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆಯವರನ್ನು ಟ್ರಸ್ಟಿಗೆ ನೂತನವಾಗಿ ಸೇರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ, ಹಿರಿಯ ಟ್ರಸ್ಟಿಗಳಾದ ಪ್ರೊ ಎ. ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಶ್ರೀಮತಿ ಉಮಾ ರಂಜನ್ ರಾವ್, ಮಂಜುನಾಥ ಶೆಟ್ಟಿ, ಕೃಷ್ಣ ಶೆಟ್ಟಿ ಹಾಗೂ ಇತರ ಪ್ರಮುಖರು ಹಾಜರಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
error: Content is protected !!