25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜ. 27 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು.

2025ರ ಆಯವ್ಯಯವನ್ನು ಮಂಜೂರುಗೊಳಿಸಲಾಯಿತು. ನೂತನ ಮುಂಗಡ ಪತ್ರ, ವಾರ್ಷಿಕ ಕ್ರಿಯಾಯೋಜನೆಯನ್ನು ಸಿದ್ದಗೊಳಿಸಲಾಯಿತು. ಘಟಕ ಪತ್ರಿಕೆ ಕಪಿಲಾ ವಾಣಿಯ ಸಂಪಾದಕರಾದ ಜಸ್ವಂತ್ ಪಿರೇರಾ ಅವರು ಸಂಚಿಕೆಗಳ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೆ ಶ್ರೀಧರ ರಾವ್ ಅವರು ಮಾರ್ಗದರ್ಶನ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್, ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ನಿಕಟಪೂರ್ವ ಅಧ್ಯಕ್ಷರಾದ ಡಾ. ಶೋಭಾ ಪಿ. ಅವರು ಚರ್ಚೆಯಲ್ಲಿ ಭಾಗವಹಿಸಿದರು.

ಅಕ್ಷತ್ ರೈ ಅವರು ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ವಾಚಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!