September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು ಹಾಗೂ ಪಂಚಾಯತ್‌ಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಮೂರು ದಿನಗಳೊಳಗೆ ಗುಡಿಸಲುಗಳನ್ನು ತೆರವುಗೊಳಿಸಲಾಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆರು ದಿನಗಳು ಕಳೆದರೂ ಕೂಡ ಗುಡಿಸಲುಗಳನ್ನು ತೆರವುಗೊಳಿಸಲಾಗಿಲ್ಲ.ಗ್ರಾಮ ಸಭೆಯ ನಿರ್ಣಯದಂತೆ, ಗುಡಿಸಲುಗಳನ್ನು ತಕ್ಷಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಆವರಣವನ್ನು ಶುಚಿಗೊಳಿಸಬೇಕೆಂದು ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯ ಹನೀಫ್ ಪುಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು.ಪಿ, ಚಾರ್ಮಾಡಿ ಬ್ರಾಂಚ್ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ ಹಾಗೂ ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya
error: Content is protected !!