22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು ಹಾಗೂ ಪಂಚಾಯತ್‌ಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಮೂರು ದಿನಗಳೊಳಗೆ ಗುಡಿಸಲುಗಳನ್ನು ತೆರವುಗೊಳಿಸಲಾಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆರು ದಿನಗಳು ಕಳೆದರೂ ಕೂಡ ಗುಡಿಸಲುಗಳನ್ನು ತೆರವುಗೊಳಿಸಲಾಗಿಲ್ಲ.ಗ್ರಾಮ ಸಭೆಯ ನಿರ್ಣಯದಂತೆ, ಗುಡಿಸಲುಗಳನ್ನು ತಕ್ಷಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಆವರಣವನ್ನು ಶುಚಿಗೊಳಿಸಬೇಕೆಂದು ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯ ಹನೀಫ್ ಪುಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು.ಪಿ, ಚಾರ್ಮಾಡಿ ಬ್ರಾಂಚ್ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ ಹಾಗೂ ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya
error: Content is protected !!