July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ಬೆಳಾಲು ಇದರ ಅಧ್ಯಕ್ಷೆ ಶಾರದಾ, ಕಾರ್ಯದರ್ಶಿ ಉಮಾದೇವಿ, ಪದಾಧಿಕಾರಿಗಳು ಪ್ರೇಮ, ಎಂ.ಬಿ.ಕೆ ಹರಿಣಾಕ್ಷಿ, ಎಲ್.ಸಿ.ಆರ್.ಪಿ ಸರಸ್ವತಿ, ಕೃಷಿ ಸಖಿ ಸ್ವಾತಿ ಹಾಗೂ ಸ್ವಚ್ಛ ಘಟಕದ ಸಿಬ್ಬಂದಿಗಳಾದ ಸುಂದರಿ ಮಾಯಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಾಗರಿಕರು ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಡ್ಡಿ ಬಿಸಾಡದೆ ಸ್ವಚ್ಛತೆಯ ಬಗ್ಗೆ ಜಾಗೃತರಾಗಿರಬೇಕೆನ್ನುವ ಸಂದೇಶವನ್ನು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

Related posts

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!