July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ, ಸಂಘ (ರಿ) ಬೆಳ್ತಂಗಡಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ, ಬಂಟ್ವಾಳ ಮತ್ತು ಪೊಲೀಸ್ ಇಲಾಖೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಜ.28ರಂದು ಬೆಳ್ತಂಗಡಿ ಎ.ಪಿ.ಎಂ.ಸಿ ಆವರಣದಲ್ಲಿ ಜರುಗಿತು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ಮನು ಬಿ.ಕೆ.ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಈ ದೇಶದ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ದೇಶದ ಕಾನೂನುಗಳನ್ನು ಗೌರವಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಕಾನೂನಿನ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ಕೆ. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮಾತನಾಡಿ, ಸಾಮಾನ್ಯ ಜನರಿಗೆ ರಕ್ಷಣೆ ನೀಡುವ ಉದ್ದೇಶವೇ ಮೋಟಾರು ಕಾನೂನು ಕಾಯ್ದೆ. ಕೆಲವು ಸಂದರ್ಭಗಳಲ್ಲಿ ಭಯ ಪಡಿಸುವ ಕಾನೂನು ಕೂಡ ಅಗತ್ಯ ಇರುತ್ತದೆ. ಮನುಷ್ಯನಿಗೆ ಮನಸ್ಸಿಗಿಂತ ದೊಡ್ಡ ಜಡ್ಜ್ ಬೇರೆ ಇಲ್ಲ ಎಂದು ರಸ್ತೆ ಸುರಕ್ಷತಾ ಕುರಿತು ಕಾನೂನು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕಿಶೋರ್, ಬೆಳ್ತಂಗಡಿ ಸಹಾಯಕ ಸರಕಾರಿ ಅಭಿಯೋಜಕರಾದ ದಿವ್ಯರಾಜ್, ಬಕ್ಕಪ್ಪ ಹೆಚ್ ಭಾಗವಹಿಸಿದರು. ಕಾರ್ಯಕ್ರಮವನ್ನು ಸುಧಾಮಣಿ ಯಶಸ್ವಿಯಾಗಿ ನಿರೂಪಿಸಿದರು.

Related posts

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!