25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ, ಸಂಘ (ರಿ) ಬೆಳ್ತಂಗಡಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ, ಬಂಟ್ವಾಳ ಮತ್ತು ಪೊಲೀಸ್ ಇಲಾಖೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಜ.28ರಂದು ಬೆಳ್ತಂಗಡಿ ಎ.ಪಿ.ಎಂ.ಸಿ ಆವರಣದಲ್ಲಿ ಜರುಗಿತು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ಮನು ಬಿ.ಕೆ.ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಈ ದೇಶದ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ದೇಶದ ಕಾನೂನುಗಳನ್ನು ಗೌರವಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಕಾನೂನಿನ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ಕೆ. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮಾತನಾಡಿ, ಸಾಮಾನ್ಯ ಜನರಿಗೆ ರಕ್ಷಣೆ ನೀಡುವ ಉದ್ದೇಶವೇ ಮೋಟಾರು ಕಾನೂನು ಕಾಯ್ದೆ. ಕೆಲವು ಸಂದರ್ಭಗಳಲ್ಲಿ ಭಯ ಪಡಿಸುವ ಕಾನೂನು ಕೂಡ ಅಗತ್ಯ ಇರುತ್ತದೆ. ಮನುಷ್ಯನಿಗೆ ಮನಸ್ಸಿಗಿಂತ ದೊಡ್ಡ ಜಡ್ಜ್ ಬೇರೆ ಇಲ್ಲ ಎಂದು ರಸ್ತೆ ಸುರಕ್ಷತಾ ಕುರಿತು ಕಾನೂನು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕಿಶೋರ್, ಬೆಳ್ತಂಗಡಿ ಸಹಾಯಕ ಸರಕಾರಿ ಅಭಿಯೋಜಕರಾದ ದಿವ್ಯರಾಜ್, ಬಕ್ಕಪ್ಪ ಹೆಚ್ ಭಾಗವಹಿಸಿದರು. ಕಾರ್ಯಕ್ರಮವನ್ನು ಸುಧಾಮಣಿ ಯಶಸ್ವಿಯಾಗಿ ನಿರೂಪಿಸಿದರು.

Related posts

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!